ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.
ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ. ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…