ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.
ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ. ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…