ಹವಾಮಾನ ವರದಿ | 01-03-2025 | ಕರಾವಳಿ ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮಾ.4 ರಂದು ಕೂಡಾ ತುಂತುರು ಮಳೆ ನಿರೀಕ್ಷೆ |

March 1, 2025
2:22 PM
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

02.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :………ಮುಂದೆ ಓದಿ……..

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯ ಜೊತೆಗೆ ಕರಾವಳಿ ತೀರ ಭಾಗಗಳಲ್ಲಿ ವಾತಾವರಣದಲ್ಲಿ ತೇವಾಂಶವೂ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಂದರೆ, ಕಾಸರಗೋಡು, ಮಂಗಳೂರು, ಬಂಟ್ವಾಳ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡ ರಾತ್ರಿಯ ವೇಳೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ರಾತ್ರಿ ಹೆಚ್ಚಿನ ಸಮಯ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿಯ ವೇಳೆ ಸೆಖೆಯ ವಾತಾವರಣದ ಸಾಧ್ಯತಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ರಾತ್ರಿಯ ವೇಳೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನ ಮಾರ್ಚ್ 4ರಿಂದ ಮೋಡ ಹೆಚ್ಚಾಗದ್ದು, ಒಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರ ಮೋಡದ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ.
ಈಗಿನಂತೆ ಮಾರ್ಚ್ 5 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿದ್ದರೂ ಮಳೆಯ ಮುನ್ಸೂಚೆನೆ ಕಾಣಿಸುತ್ತಿಲ್ಲ.

ದಕ್ಷಿಣ ಶ್ರೀಲಂಕಾ ಬಳಿ ತಲುಪಿರುವ ತಿರುವಿಕೆಯು ಇಂದು ಅರಬ್ಬಿ ಸಮುದ್ರ ಪ್ರವೇಶಿಸುವ ಹಂತದಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror