Advertisement
ಹವಾಮಾನ

ಹವಾಮಾನ ವರದಿ | 13-01-2025 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದೆ ತಾಪಮಾನ ಏರಿಕೆ ನಿರೀಕ್ಷೆ |

Share

14.01.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ತಡ ರಾತ್ರಿ ಸುಳ್ಯ, ಕಾಸರಗೋಡು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಜನವರಿ 14 ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ ತಾಪಮಾನ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ರಾತ್ರಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಶೃಂಗೇರಿ, ಕುದುರೆಮುಖ ಸ ಭಾಗಗಳಲ್ಲಿ ಅಲ್ಲಲ್ಲಿ ರಾತ್ರಿ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 14 ರಂದು ಸಹ ಮಲೆನಾಡಿನ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಳೆ ಕಡಿಮೆಯಾದರೂ ಛಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕಾಣಿಸುತ್ತಿಲ್ಲ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ( ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಲಲ್ಲಿ ಮುಂಜಾನೆಯೇ ತುಂತುರು ಮಳೆಯಾಗಿದೆ). ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜನವರಿ 14ರಿಂದ ಮಳೆ ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ತಾಪಮಾನ ಏರಿಕೆಯಾಗುವ ಲಕ್ಷಣಗಳಿವೆ.

ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago