Advertisement
ಸಾಹಿತ್ಯ

ಶ್ರೀಕೃಷ್ಣ ಚರಿತಾಮೃತ – ಕಾವ್ಯಮಾಲೆ

Share

ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದಗೋಪಾಲ ಭಟ್ ಸಿಎಚ್. ಇದರ ವಿಶೇಷತೆ ಏನು ಎಂಬುದರ ಬಗ್ಗೆ ಡಾ ಕೊಳ್ಚಪ್ಪೆ ಗೋವಿಂದ ಭಟ್ ಮಂಗಳೂರು ಇವರು ವಿವರಿಸಿದ್ದಾರೆ.

Advertisement
Advertisement

ಲೀಲಾ ಮೂರ್ತಿಯಾದ ಶ್ರೀ ಕೃಷ್ಣನ ಮಹಿಮೆಯನ್ನು ವಿದ್ವಾಂಸರು ಅವರವರ ಭಾವಕ್ಕೆ ಸರಿಯಾಗಿ ವ್ಯಾಖ್ಯಾನಿಸಿದ್ದಾರೆ.
ಶ್ರೀ ಮಹಾವಿಷ್ಣುವಿನ ದಶಾವತಾರಗಳಲ್ಲಿ ಶ್ರೀ ಕೃಷ್ಣನ ಅವತಾರವೇ ಪರಿಪೂರ್ಣವೆಂದು ಪ್ರಾಜ್ಞರ ಅನಿಸಿಕೆ. ಅಂತಹ ಮಹಾಮಹಿಮನ ಚರಿತ್ರೆ ಒಂದು ಪುಣ್ಯ ಕಥನವೂ, ಭಕ್ತಿ ಸಾಹಿತ್ಯವು ಆಗಿದೆ. ಪಾಪ ಹಾರಕ ಮತ್ತು ಮಾರ್ಗದರ್ಶಕ ವಾಗಿರುವುದರಿಂದ ಅದಕ್ಕೆ ವಿಶೇಷ ಮಹತ್ವ. ಇಂತಹ ಕಥಾನಕವನ್ನು ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದ ಗೋಪಾಲ ಭಟ್ ಸಿ ಎಚ್. ಇದು ಅವರ ಒಂದು ಉತ್ಕೃಷ್ಟವಾದ ಕೊಡುಗೆ. ಷಟ್ಪದಿ ರೂಪದಲ್ಲಿ ಸರಳವಾಗಿ ಓದಿಸಿಕೊಂಡು ಹೋಗುವ ಭಾಮಿನಿಯ ರೂಪದಲ್ಲಿದೆ.

ಒಟ್ಟು 172 ಖಂಡಗಳಲ್ಲಿ (ಅಧ್ಯಾಯಗಳಲ್ಲಿ) ರಚಿಸಲ್ಪಟ್ಟ ಈ ಸುದೀರ್ಘ ಚರಿತಾಮೃತ ಓದುಗ ಸ್ನೇಹಿಯಾಗಿರುವುದು ಕೃತಿಯ ಹೆಗ್ಗಳಿಕೆ. ಸರಳ ಕನ್ನಡದಲ್ಲಿ ಬರೆದಿರುವುದರಿಂದ ಹೆಚ್ಚಿನ ವಿದ್ವತ್ತನ್ನು ಬೇಡುವುದಿಲ್ಲ. ಭಾಷಾ ಚಮತ್ಕಾರ ವನ್ನು ಪ್ರಯತ್ನಪೂರ್ವಕವಾಗಿ ತುರುಕದಿರುವುದರಿಂದ ಸ್ವಾಭಾವಿಕವಾಗಿ ಮೂಡಿಬಂದಿದೆ.

ಈ ಕೃತಿಯ ಮಹತ್ತು ಎಂದರೆ ಅಧ್ಯಾಯ 144-161ರ ವರೆಗೆ ಭಗವದ್ಗೀತೆಯ ಅಷ್ಟಾದಶ ಅಧ್ಯಾಯಗಳು ಈ ಕೃತಿಯಲ್ಲಿ ಅಡಕವಾಗಿವೆ. ಕೃಷ್ಣಾಮೃತದಲ್ಲಿ ಕಲ್ಲುಸಕ್ಕರೆಯ ಸವಿಯು ಸೇರಿಕೊಂಡು ಸ್ವಾದಿಷ್ಟವಾಗಿದೆ.

ಗೋಪಾಲ್ ಭಟ್ ಸಿಎಚ್ ಅವರು ಪ್ರಕಾಶನ ಮಾಡಿದ ಈ ಕೃತಿಯ ಬೆಲೆ ರೂ 700. ಈ ಪತ್ರಿಕೆಯ ಓದುಗರಿಗೆ ಅಂಚೆ ವೆಚ್ಚ ಸೇರಿ ರೂ 500 ರಲ್ಲಿ ಪ್ರತಿಗಳನ್ನು 9745492565 ನಂಬರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

15 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago