Advertisement
ಸಾಹಿತ್ಯ

ಶ್ರೀಕೃಷ್ಣ ಚರಿತಾಮೃತ – ಕಾವ್ಯಮಾಲೆ

Share

ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದಗೋಪಾಲ ಭಟ್ ಸಿಎಚ್. ಇದರ ವಿಶೇಷತೆ ಏನು ಎಂಬುದರ ಬಗ್ಗೆ ಡಾ ಕೊಳ್ಚಪ್ಪೆ ಗೋವಿಂದ ಭಟ್ ಮಂಗಳೂರು ಇವರು ವಿವರಿಸಿದ್ದಾರೆ.

Advertisement

ಲೀಲಾ ಮೂರ್ತಿಯಾದ ಶ್ರೀ ಕೃಷ್ಣನ ಮಹಿಮೆಯನ್ನು ವಿದ್ವಾಂಸರು ಅವರವರ ಭಾವಕ್ಕೆ ಸರಿಯಾಗಿ ವ್ಯಾಖ್ಯಾನಿಸಿದ್ದಾರೆ.
ಶ್ರೀ ಮಹಾವಿಷ್ಣುವಿನ ದಶಾವತಾರಗಳಲ್ಲಿ ಶ್ರೀ ಕೃಷ್ಣನ ಅವತಾರವೇ ಪರಿಪೂರ್ಣವೆಂದು ಪ್ರಾಜ್ಞರ ಅನಿಸಿಕೆ. ಅಂತಹ ಮಹಾಮಹಿಮನ ಚರಿತ್ರೆ ಒಂದು ಪುಣ್ಯ ಕಥನವೂ, ಭಕ್ತಿ ಸಾಹಿತ್ಯವು ಆಗಿದೆ. ಪಾಪ ಹಾರಕ ಮತ್ತು ಮಾರ್ಗದರ್ಶಕ ವಾಗಿರುವುದರಿಂದ ಅದಕ್ಕೆ ವಿಶೇಷ ಮಹತ್ವ. ಇಂತಹ ಕಥಾನಕವನ್ನು ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದ ಗೋಪಾಲ ಭಟ್ ಸಿ ಎಚ್. ಇದು ಅವರ ಒಂದು ಉತ್ಕೃಷ್ಟವಾದ ಕೊಡುಗೆ. ಷಟ್ಪದಿ ರೂಪದಲ್ಲಿ ಸರಳವಾಗಿ ಓದಿಸಿಕೊಂಡು ಹೋಗುವ ಭಾಮಿನಿಯ ರೂಪದಲ್ಲಿದೆ.

ಒಟ್ಟು 172 ಖಂಡಗಳಲ್ಲಿ (ಅಧ್ಯಾಯಗಳಲ್ಲಿ) ರಚಿಸಲ್ಪಟ್ಟ ಈ ಸುದೀರ್ಘ ಚರಿತಾಮೃತ ಓದುಗ ಸ್ನೇಹಿಯಾಗಿರುವುದು ಕೃತಿಯ ಹೆಗ್ಗಳಿಕೆ. ಸರಳ ಕನ್ನಡದಲ್ಲಿ ಬರೆದಿರುವುದರಿಂದ ಹೆಚ್ಚಿನ ವಿದ್ವತ್ತನ್ನು ಬೇಡುವುದಿಲ್ಲ. ಭಾಷಾ ಚಮತ್ಕಾರ ವನ್ನು ಪ್ರಯತ್ನಪೂರ್ವಕವಾಗಿ ತುರುಕದಿರುವುದರಿಂದ ಸ್ವಾಭಾವಿಕವಾಗಿ ಮೂಡಿಬಂದಿದೆ.

ಈ ಕೃತಿಯ ಮಹತ್ತು ಎಂದರೆ ಅಧ್ಯಾಯ 144-161ರ ವರೆಗೆ ಭಗವದ್ಗೀತೆಯ ಅಷ್ಟಾದಶ ಅಧ್ಯಾಯಗಳು ಈ ಕೃತಿಯಲ್ಲಿ ಅಡಕವಾಗಿವೆ. ಕೃಷ್ಣಾಮೃತದಲ್ಲಿ ಕಲ್ಲುಸಕ್ಕರೆಯ ಸವಿಯು ಸೇರಿಕೊಂಡು ಸ್ವಾದಿಷ್ಟವಾಗಿದೆ.

ಗೋಪಾಲ್ ಭಟ್ ಸಿಎಚ್ ಅವರು ಪ್ರಕಾಶನ ಮಾಡಿದ ಈ ಕೃತಿಯ ಬೆಲೆ ರೂ 700. ಈ ಪತ್ರಿಕೆಯ ಓದುಗರಿಗೆ ಅಂಚೆ ವೆಚ್ಚ ಸೇರಿ ರೂ 500 ರಲ್ಲಿ ಪ್ರತಿಗಳನ್ನು 9745492565 ನಂಬರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 hour ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

2 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

13 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

17 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

17 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago