Advertisement
ಸಾಹಿತ್ಯ

ಶ್ರೀಕೃಷ್ಣ ಚರಿತಾಮೃತ – ಕಾವ್ಯಮಾಲೆ

Share

ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದಗೋಪಾಲ ಭಟ್ ಸಿಎಚ್. ಇದರ ವಿಶೇಷತೆ ಏನು ಎಂಬುದರ ಬಗ್ಗೆ ಡಾ ಕೊಳ್ಚಪ್ಪೆ ಗೋವಿಂದ ಭಟ್ ಮಂಗಳೂರು ಇವರು ವಿವರಿಸಿದ್ದಾರೆ.

Advertisement
Advertisement

ಲೀಲಾ ಮೂರ್ತಿಯಾದ ಶ್ರೀ ಕೃಷ್ಣನ ಮಹಿಮೆಯನ್ನು ವಿದ್ವಾಂಸರು ಅವರವರ ಭಾವಕ್ಕೆ ಸರಿಯಾಗಿ ವ್ಯಾಖ್ಯಾನಿಸಿದ್ದಾರೆ.
ಶ್ರೀ ಮಹಾವಿಷ್ಣುವಿನ ದಶಾವತಾರಗಳಲ್ಲಿ ಶ್ರೀ ಕೃಷ್ಣನ ಅವತಾರವೇ ಪರಿಪೂರ್ಣವೆಂದು ಪ್ರಾಜ್ಞರ ಅನಿಸಿಕೆ. ಅಂತಹ ಮಹಾಮಹಿಮನ ಚರಿತ್ರೆ ಒಂದು ಪುಣ್ಯ ಕಥನವೂ, ಭಕ್ತಿ ಸಾಹಿತ್ಯವು ಆಗಿದೆ. ಪಾಪ ಹಾರಕ ಮತ್ತು ಮಾರ್ಗದರ್ಶಕ ವಾಗಿರುವುದರಿಂದ ಅದಕ್ಕೆ ವಿಶೇಷ ಮಹತ್ವ. ಇಂತಹ ಕಥಾನಕವನ್ನು ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದ ಗೋಪಾಲ ಭಟ್ ಸಿ ಎಚ್. ಇದು ಅವರ ಒಂದು ಉತ್ಕೃಷ್ಟವಾದ ಕೊಡುಗೆ. ಷಟ್ಪದಿ ರೂಪದಲ್ಲಿ ಸರಳವಾಗಿ ಓದಿಸಿಕೊಂಡು ಹೋಗುವ ಭಾಮಿನಿಯ ರೂಪದಲ್ಲಿದೆ.

Advertisement

ಒಟ್ಟು 172 ಖಂಡಗಳಲ್ಲಿ (ಅಧ್ಯಾಯಗಳಲ್ಲಿ) ರಚಿಸಲ್ಪಟ್ಟ ಈ ಸುದೀರ್ಘ ಚರಿತಾಮೃತ ಓದುಗ ಸ್ನೇಹಿಯಾಗಿರುವುದು ಕೃತಿಯ ಹೆಗ್ಗಳಿಕೆ. ಸರಳ ಕನ್ನಡದಲ್ಲಿ ಬರೆದಿರುವುದರಿಂದ ಹೆಚ್ಚಿನ ವಿದ್ವತ್ತನ್ನು ಬೇಡುವುದಿಲ್ಲ. ಭಾಷಾ ಚಮತ್ಕಾರ ವನ್ನು ಪ್ರಯತ್ನಪೂರ್ವಕವಾಗಿ ತುರುಕದಿರುವುದರಿಂದ ಸ್ವಾಭಾವಿಕವಾಗಿ ಮೂಡಿಬಂದಿದೆ.

Advertisement

ಈ ಕೃತಿಯ ಮಹತ್ತು ಎಂದರೆ ಅಧ್ಯಾಯ 144-161ರ ವರೆಗೆ ಭಗವದ್ಗೀತೆಯ ಅಷ್ಟಾದಶ ಅಧ್ಯಾಯಗಳು ಈ ಕೃತಿಯಲ್ಲಿ ಅಡಕವಾಗಿವೆ. ಕೃಷ್ಣಾಮೃತದಲ್ಲಿ ಕಲ್ಲುಸಕ್ಕರೆಯ ಸವಿಯು ಸೇರಿಕೊಂಡು ಸ್ವಾದಿಷ್ಟವಾಗಿದೆ.

ಗೋಪಾಲ್ ಭಟ್ ಸಿಎಚ್ ಅವರು ಪ್ರಕಾಶನ ಮಾಡಿದ ಈ ಕೃತಿಯ ಬೆಲೆ ರೂ 700. ಈ ಪತ್ರಿಕೆಯ ಓದುಗರಿಗೆ ಅಂಚೆ ವೆಚ್ಚ ಸೇರಿ ರೂ 500 ರಲ್ಲಿ ಪ್ರತಿಗಳನ್ನು 9745492565 ನಂಬರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

2 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

7 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago