Advertisement
ಸಾಹಿತ್ಯ

ಶ್ರೀಕೃಷ್ಣ ಚರಿತಾಮೃತ – ಕಾವ್ಯಮಾಲೆ

Share

ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದಗೋಪಾಲ ಭಟ್ ಸಿಎಚ್. ಇದರ ವಿಶೇಷತೆ ಏನು ಎಂಬುದರ ಬಗ್ಗೆ ಡಾ ಕೊಳ್ಚಪ್ಪೆ ಗೋವಿಂದ ಭಟ್ ಮಂಗಳೂರು ಇವರು ವಿವರಿಸಿದ್ದಾರೆ.

ಲೀಲಾ ಮೂರ್ತಿಯಾದ ಶ್ರೀ ಕೃಷ್ಣನ ಮಹಿಮೆಯನ್ನು ವಿದ್ವಾಂಸರು ಅವರವರ ಭಾವಕ್ಕೆ ಸರಿಯಾಗಿ ವ್ಯಾಖ್ಯಾನಿಸಿದ್ದಾರೆ.
ಶ್ರೀ ಮಹಾವಿಷ್ಣುವಿನ ದಶಾವತಾರಗಳಲ್ಲಿ ಶ್ರೀ ಕೃಷ್ಣನ ಅವತಾರವೇ ಪರಿಪೂರ್ಣವೆಂದು ಪ್ರಾಜ್ಞರ ಅನಿಸಿಕೆ. ಅಂತಹ ಮಹಾಮಹಿಮನ ಚರಿತ್ರೆ ಒಂದು ಪುಣ್ಯ ಕಥನವೂ, ಭಕ್ತಿ ಸಾಹಿತ್ಯವು ಆಗಿದೆ. ಪಾಪ ಹಾರಕ ಮತ್ತು ಮಾರ್ಗದರ್ಶಕ ವಾಗಿರುವುದರಿಂದ ಅದಕ್ಕೆ ವಿಶೇಷ ಮಹತ್ವ. ಇಂತಹ ಕಥಾನಕವನ್ನು ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ “ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ”. ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದ ಗೋಪಾಲ ಭಟ್ ಸಿ ಎಚ್. ಇದು ಅವರ ಒಂದು ಉತ್ಕೃಷ್ಟವಾದ ಕೊಡುಗೆ. ಷಟ್ಪದಿ ರೂಪದಲ್ಲಿ ಸರಳವಾಗಿ ಓದಿಸಿಕೊಂಡು ಹೋಗುವ ಭಾಮಿನಿಯ ರೂಪದಲ್ಲಿದೆ.

ಒಟ್ಟು 172 ಖಂಡಗಳಲ್ಲಿ (ಅಧ್ಯಾಯಗಳಲ್ಲಿ) ರಚಿಸಲ್ಪಟ್ಟ ಈ ಸುದೀರ್ಘ ಚರಿತಾಮೃತ ಓದುಗ ಸ್ನೇಹಿಯಾಗಿರುವುದು ಕೃತಿಯ ಹೆಗ್ಗಳಿಕೆ. ಸರಳ ಕನ್ನಡದಲ್ಲಿ ಬರೆದಿರುವುದರಿಂದ ಹೆಚ್ಚಿನ ವಿದ್ವತ್ತನ್ನು ಬೇಡುವುದಿಲ್ಲ. ಭಾಷಾ ಚಮತ್ಕಾರ ವನ್ನು ಪ್ರಯತ್ನಪೂರ್ವಕವಾಗಿ ತುರುಕದಿರುವುದರಿಂದ ಸ್ವಾಭಾವಿಕವಾಗಿ ಮೂಡಿಬಂದಿದೆ.

ಈ ಕೃತಿಯ ಮಹತ್ತು ಎಂದರೆ ಅಧ್ಯಾಯ 144-161ರ ವರೆಗೆ ಭಗವದ್ಗೀತೆಯ ಅಷ್ಟಾದಶ ಅಧ್ಯಾಯಗಳು ಈ ಕೃತಿಯಲ್ಲಿ ಅಡಕವಾಗಿವೆ. ಕೃಷ್ಣಾಮೃತದಲ್ಲಿ ಕಲ್ಲುಸಕ್ಕರೆಯ ಸವಿಯು ಸೇರಿಕೊಂಡು ಸ್ವಾದಿಷ್ಟವಾಗಿದೆ.

ಗೋಪಾಲ್ ಭಟ್ ಸಿಎಚ್ ಅವರು ಪ್ರಕಾಶನ ಮಾಡಿದ ಈ ಕೃತಿಯ ಬೆಲೆ ರೂ 700. ಈ ಪತ್ರಿಕೆಯ ಓದುಗರಿಗೆ ಅಂಚೆ ವೆಚ್ಚ ಸೇರಿ ರೂ 500 ರಲ್ಲಿ ಪ್ರತಿಗಳನ್ನು 9745492565 ನಂಬರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

5 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago