ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |

February 21, 2024
8:09 PM
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2024′  ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. ಖ್ಯಾತ ವಕೀಲರಾದ  ಜಯರಾಮ ಎ ಮತ್ತು  ಆಶಾ ಜಯರಾಮ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಅನ್ನಪೂರ್ಣ, ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ  ಗಣಪತಿ ಶರ್ಮ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಸೂರಜ್, ಗ್ರಹತಿ ಮತ್ತು ಸುನಿಧಿ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ, ಶ್ರೀರಾಮ ಕಾಂಚನ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಮತ್ತು ವಿಶ್ವಮಿಹಿರ ಸಹಕರಿಸಿದರು.
ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ವಿದ್ವಾನ್ ಪಟ್ಟಾಭಿರಾಮ ಪಂಡಿತ್ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದುಷಿ ಚಾರುಲತಾ ರಾಮಾನುಜಂ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಮತ್ತು ಘಟಂನಲ್ಲಿ ವಿದ್ವಾನ್ ಶಿನು ಗೋಪಿನಾಥ್ ಅವರು ಸಹಕರಿಸಿದರು.
Advertisement

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ
ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ
April 30, 2025
10:18 AM
by: The Rural Mirror ಸುದ್ದಿಜಾಲ
ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!
April 30, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group