ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸಿದ ಶ್ರೀಲಂಕಾ

April 11, 2022
2:26 PM

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.

ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |
March 10, 2025
10:32 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!
March 10, 2025
8:07 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ
March 8, 2025
6:52 AM
by: The Rural Mirror ಸುದ್ದಿಜಾಲ
ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ
March 6, 2025
9:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror