ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.
ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…