ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.
ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…