ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.
ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…