41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

June 25, 2025
6:27 PM

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು. ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು, ಸ್ಪೇಸ್‌ಎಕ್ಸ್‌ನ ಫಾಲ್ಕನ್-‌9 ರಾಕೆಟ್‌ನಲ್ಲಿ ನಭಕ್ಕೆ ಚಿಮ್ಮಿದೆ.  ಭಾರತದೊಂದಿಗೆ ಹಂಗರಿ ಮತ್ತು ಪೋಲೆಂಡ್ ದೇಶದ ನಾಲ್ವರು ಗಗನಯಾತ್ರಿಗಳು ಭಾಗವಹಿಸಿದ್ದಾರೆ.  ಈ ಮೂಲಕ 41 ವರ್ಷಗಳ ಬಳಿಕ ಬಾಹ್ಯಾಕಾಶ ಯಾನದಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿ ದಾಖಲೆ ಬರೆದಿದೆ.

ಬಾಹ್ಯಾಕಾಶಕ್ಕೆ ತೆರಳುವ ವೇಳೆ ಮಾತನಾಡಿರುವ ಶುಕ್ಲಾ “ಇದು ತನ್ನ ವೈಯಕ್ತಿಕ ಪ್ರಯಾಣವಲ್ಲ, ಭಾರತದ ಮಾನವ ಬಾಹ್ಯಾಕಾಶ ಪ್ರಯಾಣವಾಗಿದೆ. ತನ್ನೊಂದಿಗೆ ಭಾರತದ ಧ್ವಜವನ್ನು ಕೊಂಡೊಯ್ಯುತ್ತಿದ್ದೇನೆ” ಎಂದು ತಿಳಿಸಿದ್ದಾರೆ.  41 ವರ್ಷಗಳ ನಂತರ ಭಾರತವು ಬಾಹ್ಯಕಾಶಕ್ಕೆ ಗಗನಯಾತ್ರಿಯನ್ನು ಕಳುಹಿಸಿದೆ. 1984 ರಲ್ಲಿ ತೆರಳಿದ್ದ ರಾಕೇಶ್ ಶರ್ಮಾ ಬಳಿಕ ಶುಕ್ಲಾ ಬಾಹ್ಯಾಕಾಶಕ್ಕೆ ತೆರಳಿದ ಎರಡನೇ ಭಾರತೀಯನಾಗಿದ್ದಾರೆ.

ಗಗನಯಾತ್ರಿಗಳು ಮುಂದಿನ ಎರಡು ವಾರಗಳವರೆಗೆ ವಿಜ್ಞಾನ, ಸಂವಹನ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಒಳಗೊಂಡಿರುವ ಪ್ರಯೋಗಗಳನ್ನು ನಡೆಸಲಿದ್ದಾರೆ.  ಕಳೆದ ತಿಂಗಳಿನಿಂದ ಈ ಕಾರ್ಯಾಚರಣೆಗೆ ಸಿದ್ಧತೆಗಳು ನಡೆದಿದ್ದವು. ಆದರೆ ತಾಂತ್ರಿಕ ದೋಷಗಳಿಂದಾಗಿ ಉಡಾವಣೆಯನ್ನು ಏಳು ಬಾರಿ ಮುಂದೂಡಲಾಗಿತ್ತು. ಇಂದು ಅದು ಯಶಸ್ವಿಯಾಗಿ ಉಡಾವಣೆಗೊಂಡಿದೆ. ಎಲ್ಲವೂ ನಿಗದಿಯಂತೆ ನಡೆದರೆ ಈ ನೌಕೆ ನಾಳೆ  ಭಾರತೀಯ ಸಮಯ ಸಂಜೆ 4:30ಕ್ಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕಿಂಗ್‌ ಆಗಲಿದೆ. ಆಕ್ಸಿಯಮ್​ ಮಿಷನ್​-4 ಯಶಸ್ವಿಯಾಗಿ ಉಡಾವಣೆಗೊಂಡ ಬಳಿಕ ವಿಜ್ಞಾನಿಗಳ ಜೊತೆ ಗಗನಯಾತ್ರಿ ಶುಭಾಂಶು ಶುಕ್ಲಾ  ಅವರ ತಂದೆ-ತಾಯಿ ಸಂಭ್ರಮ ಆಚರಿಸಿದರು.

ಬಳಿಕ ಸಚಿವ ಜಿತೇಂದ್ರ ಸಿಂಗ್‌, ಇದು ಭಾರತದ ಪಾಲಿಗೆ ಐತಿಹಾಸಿಕ ದಿನವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 41 ವರ್ಷಗಳ ಬಳಿಕ ಭಾರತ ಬಾಹ್ಯಾಕಾಶದಲ್ಲಿ ಇಂಥದ್ದೊಂದು ಸಾಧನೆ ಮಾಡಿದೆ  ಎಂದರು. ಚಂದ್ರಯಾನ ಮಿಷನ್‌ ಯಶಸ್ವಿಯಾದ ಬೆನ್ನಲ್ಲೇ ಭಾರತವು ಇಂಥದ್ದೊಂದು ಸಾಧನೆ ಮಾಡಿರುವುದು ರಾಷ್ಟ್ರದ ಹೆಮ್ಮೆ ಎಂದ ಸಚಿವರು, ವಿಕಸಿತ ಭಾರತದ ಪರಿಕಲ್ಪನೆ ಸಾಕಾರಕ್ಕೆ ಇದೊಂದು ದಿಟ್ಟ ಹೆಜ್ಜೆಯಾಗಿದೆ ಎಂದರು. ಭಾರತವೇ ರೂಪಿಸಿರುವ ಏಳು ಪ್ರಯೋಗಗಳನ್ನು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ನಡೆಸಲಿದ್ದಾರೆ ಎಂದರು.

14 ದಿನಗಳ ಕಾಲ ಐಎಸ್​ಎಸ್​ನಲ್ಲೇ ಇರುವ ನಾಲ್ವರು ಗಗನಯಾತ್ರಿಗಳು, 60 ರೀತಿಯ ವಿವಿಧ ಪ್ರಯೋಗಗಳನ್ನ ನಡೆಸಲಿದ್ದಾರೆ. ಮುಖ್ಯವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಸೇರಿದಂತೆ 60 ರೀತಿಯ ವಿವಿಧ ಪ್ರಯೋಗ ಮಾಡಲಿದ್ದಾರೆ. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ವಿವಿಧ ಪ್ರಯೋಗ ಮಾಡಲಿದ್ದಾರೆ. ಕರ್ನಾಟಕದ ಅಧ್ಯಯನ ಸಂಸ್ಥೆಗಳು ರೂಪಿಸಿರುವ 4 ಪ್ರಯೋಗಗಳು ಅಲ್ಲಿ ನಡೆಯಲಿವೆ. ಜೊತೆಗೆ ದೆಹಲಿಯ 2 ಪ್ರಯೋಗ, ಕೇರಳದ 1 ಪ್ರಯೋಗ ಸಂಬಂಧ ಅಧ್ಯಯನ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ
May 30, 2026
3:35 PM
by: ಸಾಯಿಶೇಖರ್ ಕರಿಕಳ
ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ
May 30, 2026
7:08 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?
May 29, 2026
10:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!
May 29, 2026
2:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror