Advertisement
MIRROR FOCUS

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

Share

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು. ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು, ಸ್ಪೇಸ್‌ಎಕ್ಸ್‌ನ ಫಾಲ್ಕನ್-‌9 ರಾಕೆಟ್‌ನಲ್ಲಿ ನಭಕ್ಕೆ ಚಿಮ್ಮಿದೆ.  ಭಾರತದೊಂದಿಗೆ ಹಂಗರಿ ಮತ್ತು ಪೋಲೆಂಡ್ ದೇಶದ ನಾಲ್ವರು ಗಗನಯಾತ್ರಿಗಳು ಭಾಗವಹಿಸಿದ್ದಾರೆ.  ಈ ಮೂಲಕ 41 ವರ್ಷಗಳ ಬಳಿಕ ಬಾಹ್ಯಾಕಾಶ ಯಾನದಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿ ದಾಖಲೆ ಬರೆದಿದೆ.

ಬಾಹ್ಯಾಕಾಶಕ್ಕೆ ತೆರಳುವ ವೇಳೆ ಮಾತನಾಡಿರುವ ಶುಕ್ಲಾ “ಇದು ತನ್ನ ವೈಯಕ್ತಿಕ ಪ್ರಯಾಣವಲ್ಲ, ಭಾರತದ ಮಾನವ ಬಾಹ್ಯಾಕಾಶ ಪ್ರಯಾಣವಾಗಿದೆ. ತನ್ನೊಂದಿಗೆ ಭಾರತದ ಧ್ವಜವನ್ನು ಕೊಂಡೊಯ್ಯುತ್ತಿದ್ದೇನೆ” ಎಂದು ತಿಳಿಸಿದ್ದಾರೆ.  41 ವರ್ಷಗಳ ನಂತರ ಭಾರತವು ಬಾಹ್ಯಕಾಶಕ್ಕೆ ಗಗನಯಾತ್ರಿಯನ್ನು ಕಳುಹಿಸಿದೆ. 1984 ರಲ್ಲಿ ತೆರಳಿದ್ದ ರಾಕೇಶ್ ಶರ್ಮಾ ಬಳಿಕ ಶುಕ್ಲಾ ಬಾಹ್ಯಾಕಾಶಕ್ಕೆ ತೆರಳಿದ ಎರಡನೇ ಭಾರತೀಯನಾಗಿದ್ದಾರೆ.

ಗಗನಯಾತ್ರಿಗಳು ಮುಂದಿನ ಎರಡು ವಾರಗಳವರೆಗೆ ವಿಜ್ಞಾನ, ಸಂವಹನ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಒಳಗೊಂಡಿರುವ ಪ್ರಯೋಗಗಳನ್ನು ನಡೆಸಲಿದ್ದಾರೆ.  ಕಳೆದ ತಿಂಗಳಿನಿಂದ ಈ ಕಾರ್ಯಾಚರಣೆಗೆ ಸಿದ್ಧತೆಗಳು ನಡೆದಿದ್ದವು. ಆದರೆ ತಾಂತ್ರಿಕ ದೋಷಗಳಿಂದಾಗಿ ಉಡಾವಣೆಯನ್ನು ಏಳು ಬಾರಿ ಮುಂದೂಡಲಾಗಿತ್ತು. ಇಂದು ಅದು ಯಶಸ್ವಿಯಾಗಿ ಉಡಾವಣೆಗೊಂಡಿದೆ. ಎಲ್ಲವೂ ನಿಗದಿಯಂತೆ ನಡೆದರೆ ಈ ನೌಕೆ ನಾಳೆ  ಭಾರತೀಯ ಸಮಯ ಸಂಜೆ 4:30ಕ್ಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕಿಂಗ್‌ ಆಗಲಿದೆ. ಆಕ್ಸಿಯಮ್​ ಮಿಷನ್​-4 ಯಶಸ್ವಿಯಾಗಿ ಉಡಾವಣೆಗೊಂಡ ಬಳಿಕ ವಿಜ್ಞಾನಿಗಳ ಜೊತೆ ಗಗನಯಾತ್ರಿ ಶುಭಾಂಶು ಶುಕ್ಲಾ  ಅವರ ತಂದೆ-ತಾಯಿ ಸಂಭ್ರಮ ಆಚರಿಸಿದರು.

ಬಳಿಕ ಸಚಿವ ಜಿತೇಂದ್ರ ಸಿಂಗ್‌, ಇದು ಭಾರತದ ಪಾಲಿಗೆ ಐತಿಹಾಸಿಕ ದಿನವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 41 ವರ್ಷಗಳ ಬಳಿಕ ಭಾರತ ಬಾಹ್ಯಾಕಾಶದಲ್ಲಿ ಇಂಥದ್ದೊಂದು ಸಾಧನೆ ಮಾಡಿದೆ  ಎಂದರು. ಚಂದ್ರಯಾನ ಮಿಷನ್‌ ಯಶಸ್ವಿಯಾದ ಬೆನ್ನಲ್ಲೇ ಭಾರತವು ಇಂಥದ್ದೊಂದು ಸಾಧನೆ ಮಾಡಿರುವುದು ರಾಷ್ಟ್ರದ ಹೆಮ್ಮೆ ಎಂದ ಸಚಿವರು, ವಿಕಸಿತ ಭಾರತದ ಪರಿಕಲ್ಪನೆ ಸಾಕಾರಕ್ಕೆ ಇದೊಂದು ದಿಟ್ಟ ಹೆಜ್ಜೆಯಾಗಿದೆ ಎಂದರು. ಭಾರತವೇ ರೂಪಿಸಿರುವ ಏಳು ಪ್ರಯೋಗಗಳನ್ನು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ನಡೆಸಲಿದ್ದಾರೆ ಎಂದರು.

14 ದಿನಗಳ ಕಾಲ ಐಎಸ್​ಎಸ್​ನಲ್ಲೇ ಇರುವ ನಾಲ್ವರು ಗಗನಯಾತ್ರಿಗಳು, 60 ರೀತಿಯ ವಿವಿಧ ಪ್ರಯೋಗಗಳನ್ನ ನಡೆಸಲಿದ್ದಾರೆ. ಮುಖ್ಯವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಸೇರಿದಂತೆ 60 ರೀತಿಯ ವಿವಿಧ ಪ್ರಯೋಗ ಮಾಡಲಿದ್ದಾರೆ. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ವಿವಿಧ ಪ್ರಯೋಗ ಮಾಡಲಿದ್ದಾರೆ. ಕರ್ನಾಟಕದ ಅಧ್ಯಯನ ಸಂಸ್ಥೆಗಳು ರೂಪಿಸಿರುವ 4 ಪ್ರಯೋಗಗಳು ಅಲ್ಲಿ ನಡೆಯಲಿವೆ. ಜೊತೆಗೆ ದೆಹಲಿಯ 2 ಪ್ರಯೋಗ, ಕೇರಳದ 1 ಪ್ರಯೋಗ ಸಂಬಂಧ ಅಧ್ಯಯನ ನಡೆಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

3 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

9 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

9 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

20 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

20 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago