ಮಂಡ್ಯ ಜಿಲ್ಲೆಯಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆಗಳು 14 ದಿನದೊಳಗಾಗಿ ರೈತರಿಂದ ಖರೀದಿ ಮಾಡುವ ಕಬ್ಬಿನ ಹಣ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆಯ ಮಾಲೀಕರು ಹಾಗೂ ರೈತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮೈ ಶುಗರ್ ಸಕ್ಕರೆ ಕಾರ್ಖಾನೆಯು ಸರ್ಕಾರಿ ಸಂಸ್ಥೆಯಾಗಿದ್ದು, ರೈತರಿಂದ ಖರೀದಿ ಮಾಡಿರುವ ಕಬ್ಬಿಗೆ ಹಣ ಪಾವತಿಸಿದೆ. ಖಾಸಗಿ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಸೂಚಿಸಿದ್ದಾರೆ.ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ, ಕೊಪ್ಪ ಎನ್.ಎಸ್.ಎಲ್ ಹಾಗೂ ಕೆ.ಆರ್.ಪೇಟೆ ಕೋರಮಂಡಲ್ ಸಕ್ಕರೆ ಕಾರ್ಖಾನೆಗಳಲ್ಲಿ ಪಾವತಿಗೆ ಬಾಕಿ ಇರುವ ರೈತರ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯವರು ಮಾರ್ಚ್ 10 ರೊಳಗೆ ಹಣ ಪಾವತಿ ಮಾಡಬೇಕು. ಕೋರಮಂಡಲ್ ಹಾಗೂ ಎನ್.ಎಸ್.ಎಲ್ ಕಾರ್ಖಾನೆ ಅವರು ಇದೇ 28 ರೊಳಗಾಗಿ ಹಣ ಪಾವತಿಸುವಂತೆ ನಿರ್ದೇಶನ ನೀಡಿದ್ದಾರೆ.ಇದೇ ವೇಳೆ ಸಕ್ಕರೆ ಕಾರ್ಖಾನೆಗಳು ರೈತರು ಉಪಯೋಗಿಸಬೇಕಿರುವ ತಳಿ, ಗೊಬ್ಬರ, ಬೆಳೆಯಲ್ಲಿ ನೀಡಬೇಕಿರುವ ಅಂತರ ಸೇರಿದಂತೆ ಕೃಷಿ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…