ಮಂಡ್ಯ ಜಿಲ್ಲೆಯಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆಗಳು 14 ದಿನದೊಳಗಾಗಿ ರೈತರಿಂದ ಖರೀದಿ ಮಾಡುವ ಕಬ್ಬಿನ ಹಣ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆಯ ಮಾಲೀಕರು ಹಾಗೂ ರೈತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮೈ ಶುಗರ್ ಸಕ್ಕರೆ ಕಾರ್ಖಾನೆಯು ಸರ್ಕಾರಿ ಸಂಸ್ಥೆಯಾಗಿದ್ದು, ರೈತರಿಂದ ಖರೀದಿ ಮಾಡಿರುವ ಕಬ್ಬಿಗೆ ಹಣ ಪಾವತಿಸಿದೆ. ಖಾಸಗಿ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಸೂಚಿಸಿದ್ದಾರೆ.ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ, ಕೊಪ್ಪ ಎನ್.ಎಸ್.ಎಲ್ ಹಾಗೂ ಕೆ.ಆರ್.ಪೇಟೆ ಕೋರಮಂಡಲ್ ಸಕ್ಕರೆ ಕಾರ್ಖಾನೆಗಳಲ್ಲಿ ಪಾವತಿಗೆ ಬಾಕಿ ಇರುವ ರೈತರ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯವರು ಮಾರ್ಚ್ 10 ರೊಳಗೆ ಹಣ ಪಾವತಿ ಮಾಡಬೇಕು. ಕೋರಮಂಡಲ್ ಹಾಗೂ ಎನ್.ಎಸ್.ಎಲ್ ಕಾರ್ಖಾನೆ ಅವರು ಇದೇ 28 ರೊಳಗಾಗಿ ಹಣ ಪಾವತಿಸುವಂತೆ ನಿರ್ದೇಶನ ನೀಡಿದ್ದಾರೆ.ಇದೇ ವೇಳೆ ಸಕ್ಕರೆ ಕಾರ್ಖಾನೆಗಳು ರೈತರು ಉಪಯೋಗಿಸಬೇಕಿರುವ ತಳಿ, ಗೊಬ್ಬರ, ಬೆಳೆಯಲ್ಲಿ ನೀಡಬೇಕಿರುವ ಅಂತರ ಸೇರಿದಂತೆ ಕೃಷಿ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…