ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ ಬುಡ ಸಮೇತ ತೆಗೆದು ಹಾಕಬೇಕೆಂದು ಮಾನವ ಹಕ್ಕುಗಳ ಅಯೋಗದ ಅಧ್ಯಕ್ಷರಾದ ಶ್ಯಾಂಭಟ್ ತಿಳಿಸಿದ್ದಾರೆ.
ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಕಂಡುಬಂದಲ್ಲಿ ಅವುಗಳನ್ನು ಪತ್ರಿಕೆಗಳು, ಸುದ್ದಿ ವಾಹಿನಿಗಳಲ್ಲಿ ಹೆಚ್ಚಾಗಿ ಪ್ರಕಟಿಸುವ ಮೂಲಕ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇದರ ವಿದುದ್ದ ತೆಗೆದುಕೊಂಡಂತಹ ಕ್ರಮಗಳ ಬಗ್ಗೆ ಹೆಚ್ಚು ಪ್ರಕಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು. ಸಾಮಾಜಿಕ ಬಹಿಷ್ಕಾರ ಎಂಬ ಪಿಡುಗು ತೊಲಗಬೇಕು ಇದನ್ನು ಬುಡ ಸಮೇತ ಕೀಳಲು ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಮುಖ್ಯವಾಗಿ ತಹಸಿಲ್ದಾರ್ ಸಿಡಿಪಿಓ ಮತ್ತು ಪೊಲೀಸ್ ಇಲಾಖೆಯವರು ಇದರ ಬಗ್ಗೆ ಹೆಚ್ಚಾಗಿ ಗಮನ ವಹಿಸಬೇಕು. ಇಂತಹ ಘಟನೆ ಸಂಭವಿಸಿದಲ್ಲಿ ಕೂಡಲೇ ಕ್ರಮ ವಹಿಸಿ ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು. ಸಾಮಾಜಿಕ ಬಹಿಷ್ಕಾರದ ದೂರಿನ ಹಿನ್ನೆಲೆ ಕಂದೇಗಾಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು. ಗ್ರಾಮದಲ್ಲಿ ಬಹಿಷ್ಕಾರವನ್ನು ಹಾಕಿರುವಂತಹ ವಾತಾವರಣ ಕಾಣುತಿಲ್ಲ ಒಂದು ವೇಳೆ ಅಂತಹ ಬೆಳವಣಿಗೆಗಳಾದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…
ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ…
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ…
ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು…
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು…