ನನ್ನ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಬಂಧ ಚೆನ್ನಾಗಿದೆ: ಸಿದ್ದರಾಮಯ್ಯ

April 9, 2023
11:09 AM

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ., ಅಧಿಕಾರಕ್ಕಾಗಿ ಇಬ್ಬರೂ ಬಡಿದಾಡಿಕೊಳ್ಳುತ್ತಿದ್ದಾರೆ. ಇಬ್ಬರು ಸಿಎಂ ಸ್ಥಾನದ ಆಕಾಂಕ್ಷಿಗಳು. ಹೈಕಮಾಂಡ್ ಗೂ ಕೇರ್ ಅನ್ನದೆ ಬಹಿರಂಗ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಆದ್ರೂ ಡಿಕೆಶಿ, ಸಿದ್ದು ಮಾಧ್ಯಮದ ಮುಂದೆ ತಾವು ಚೆನ್ನಾಗಿದ್ದೇವೆ ಅಂತಾರೆ.

ಇದಕ್ಕೆ ಸ್ಪಷ್ಟನೆಯೆಂಬಂತೆ ನಿನ್ನೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ನನ್ನ ಮತ್ತು ಡಿ ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ನಾವಿಬ್ಬರೂ ಚೆನ್ನಾಗಿದ್ದೇವೆ ಎಂದಿದ್ದಾರೆ.

ಸಹಜವಾಗಿ, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿವೆ ಆದರೆ ಅದು ಪಕ್ಷದ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿಯಲ್ಲ ಎಂದು ಹೇಳಿದ್ದಾರೆ, ನಾನು ನನ್ನ ತವರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಇದು ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಬಿಜೆಪಿ ರೀತಿ ಮತೀಯ ಪಕ್ಷವಲ್ಲ, ನಮ್ಮದು ಜಾತ್ಯತೀತ ಪಕ್ಷ. ಕರ್ನಾಟಕದಲ್ಲಿ ಯಾವ ಜಾತಿ, ಮತ, ಧರ್ಮಗಳ ಮಧ್ಯೆ ನಾವು ಬೇಧಭಾವ ಮಾಡುವುದಿಲ್ಲ. ಹಿಂದುಗಳಿರಲಿ, ಮುಸ್ಲಿಮರಿರಲಿ, ಕ್ರೈಸ್ತರಿರಲಿ ಅಥವಾ ಬೇರೆ ಯಾವುದೇ ಜಾತಿ, ಧರ್ಮದವರಾಗಿರಲಿ ನಾವು ಎಲ್ಲರನ್ನೂ ಒಂದೇ ಭಾವನೆಯಿಂದ ಕಾಣುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror