Political mirror

ನನ್ನ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಬಂಧ ಚೆನ್ನಾಗಿದೆ: ಸಿದ್ದರಾಮಯ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ., ಅಧಿಕಾರಕ್ಕಾಗಿ ಇಬ್ಬರೂ ಬಡಿದಾಡಿಕೊಳ್ಳುತ್ತಿದ್ದಾರೆ. ಇಬ್ಬರು ಸಿಎಂ ಸ್ಥಾನದ ಆಕಾಂಕ್ಷಿಗಳು. ಹೈಕಮಾಂಡ್ ಗೂ ಕೇರ್ ಅನ್ನದೆ ಬಹಿರಂಗ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಆದ್ರೂ ಡಿಕೆಶಿ, ಸಿದ್ದು ಮಾಧ್ಯಮದ ಮುಂದೆ ತಾವು ಚೆನ್ನಾಗಿದ್ದೇವೆ ಅಂತಾರೆ.

Advertisement

ಇದಕ್ಕೆ ಸ್ಪಷ್ಟನೆಯೆಂಬಂತೆ ನಿನ್ನೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ನನ್ನ ಮತ್ತು ಡಿ ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ನಾವಿಬ್ಬರೂ ಚೆನ್ನಾಗಿದ್ದೇವೆ ಎಂದಿದ್ದಾರೆ.

ಸಹಜವಾಗಿ, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿವೆ ಆದರೆ ಅದು ಪಕ್ಷದ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿಯಲ್ಲ ಎಂದು ಹೇಳಿದ್ದಾರೆ, ನಾನು ನನ್ನ ತವರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಇದು ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಬಿಜೆಪಿ ರೀತಿ ಮತೀಯ ಪಕ್ಷವಲ್ಲ, ನಮ್ಮದು ಜಾತ್ಯತೀತ ಪಕ್ಷ. ಕರ್ನಾಟಕದಲ್ಲಿ ಯಾವ ಜಾತಿ, ಮತ, ಧರ್ಮಗಳ ಮಧ್ಯೆ ನಾವು ಬೇಧಭಾವ ಮಾಡುವುದಿಲ್ಲ. ಹಿಂದುಗಳಿರಲಿ, ಮುಸ್ಲಿಮರಿರಲಿ, ಕ್ರೈಸ್ತರಿರಲಿ ಅಥವಾ ಬೇರೆ ಯಾವುದೇ ಜಾತಿ, ಧರ್ಮದವರಾಗಿರಲಿ ನಾವು ಎಲ್ಲರನ್ನೂ ಒಂದೇ ಭಾವನೆಯಿಂದ ಕಾಣುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

9 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

17 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

17 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

20 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

2 days ago