Political mirror

ನನ್ನ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಬಂಧ ಚೆನ್ನಾಗಿದೆ: ಸಿದ್ದರಾಮಯ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ., ಅಧಿಕಾರಕ್ಕಾಗಿ ಇಬ್ಬರೂ ಬಡಿದಾಡಿಕೊಳ್ಳುತ್ತಿದ್ದಾರೆ. ಇಬ್ಬರು ಸಿಎಂ ಸ್ಥಾನದ ಆಕಾಂಕ್ಷಿಗಳು. ಹೈಕಮಾಂಡ್ ಗೂ ಕೇರ್ ಅನ್ನದೆ ಬಹಿರಂಗ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಆದ್ರೂ ಡಿಕೆಶಿ, ಸಿದ್ದು ಮಾಧ್ಯಮದ ಮುಂದೆ ತಾವು ಚೆನ್ನಾಗಿದ್ದೇವೆ ಅಂತಾರೆ.

Advertisement
Advertisement

ಇದಕ್ಕೆ ಸ್ಪಷ್ಟನೆಯೆಂಬಂತೆ ನಿನ್ನೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ನನ್ನ ಮತ್ತು ಡಿ ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ನಾವಿಬ್ಬರೂ ಚೆನ್ನಾಗಿದ್ದೇವೆ ಎಂದಿದ್ದಾರೆ.

ಸಹಜವಾಗಿ, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿವೆ ಆದರೆ ಅದು ಪಕ್ಷದ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿಯಲ್ಲ ಎಂದು ಹೇಳಿದ್ದಾರೆ, ನಾನು ನನ್ನ ತವರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಇದು ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಬಿಜೆಪಿ ರೀತಿ ಮತೀಯ ಪಕ್ಷವಲ್ಲ, ನಮ್ಮದು ಜಾತ್ಯತೀತ ಪಕ್ಷ. ಕರ್ನಾಟಕದಲ್ಲಿ ಯಾವ ಜಾತಿ, ಮತ, ಧರ್ಮಗಳ ಮಧ್ಯೆ ನಾವು ಬೇಧಭಾವ ಮಾಡುವುದಿಲ್ಲ. ಹಿಂದುಗಳಿರಲಿ, ಮುಸ್ಲಿಮರಿರಲಿ, ಕ್ರೈಸ್ತರಿರಲಿ ಅಥವಾ ಬೇರೆ ಯಾವುದೇ ಜಾತಿ, ಧರ್ಮದವರಾಗಿರಲಿ ನಾವು ಎಲ್ಲರನ್ನೂ ಒಂದೇ ಭಾವನೆಯಿಂದ ಕಾಣುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

6 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

7 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

16 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

17 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

17 hours ago