Advertisement
ಕೃಷಿ

ಅಡಿಕೆ ಬೆಳೆಗಾರರ ಪರ ಧ್ವನಿ | ಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಳ ನಿರ್ಧಾರ | ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡನೆ |

Share

ವಿದೇಶಿ ಅಡಿಕೆಯ ಆಮದಿನ ಮೇಲಿನ ಅಬಕಾರಿ ಸುಂಕವನ್ನು ಶೇ. 110 ರಷ್ಟು ಕಡಿಮೆ ಮಾಡಿ, ಇಲ್ಲಿನ ಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ  ಖಂಡಿಸಿದ್ದಾರೆ.‌ ದೇಶದ ಅಡಿಕೆ ಬೆಳೆಗಾರರ ಪರವಾಗಿ ನಿಲ್ಲಬೇಕಾದ ಸರ್ಕಾರ ಅಡಿಕೆ ಬೆಳೆಗಾರರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಸಿದ್ಧರಾಮಯ್ಯ ಅವರು, ಮಲೆನಾಡು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದಾಗ  ಅಡಿಕೆ ಬೆಳೆಗಾರರು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಈಚೆಗೆ  ಸಮಸ್ಯೆ ಬಿಗಡಾಯಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಡಿಸಿದರು. ಈಗಾಗಲೇ ಅಡಿಕೆಗೆ ಕೊಳೆ ರೋಗ, ಹಳದಿ ಎಲೆ,  ಎಲೆಚುಕ್ಕೆ ರೋಗವೂ ಕಾಡುತ್ತಿದೆ. ಇದೆಲ್ಲಾ ಕಾರಣಗಳಿಂದ ಅಡಿಕೆ ಬೆಳೆಗಾರರು ಬೀದಿಗೆ ಬೀಳುವಂತಾಗಿ, ಮಧ್ಯಮ  ಬೆಳೆಗಾರರ ಆದಾಯ ಅಷ್ಟಕಷ್ಟೆ ಎನ್ನುವಂತಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳ  ನಡುವೆಯೂ ಕೇಂದ್ರ ಸರ್ಕಾರ ನಮ್ಮ ಅಡಿಕೆಯ ಮೇಲೆ ಜಿಎಸ್‌ಟಿ ಹೆಚ್ಚಿಸುತ್ತಾ, ವಿದೇಶದಿಂದ ಬರುವ ಆಮದು ಅಡಿಕೆ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುತ್ತಿದೆ.ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಅಡಿಕೆಯ ಕನಿಷ್ಠ ಆಮದು ದರ 110ರೂ ಇದ್ದಾಗ ಕ್ವಿಂಟಾಲ್ ಅಡಿಕೆ ಬೆಲೆ ಸರಾಸರಿ 75 ಸಾವಿರ ರೂಪಾಯಿ ಇತ್ತು. ಈಗ ಕನಿಷ್ಠ ಆಮದು ದರ 251 ಇದೆ. ಆದರೂ ಅಡಿಕೆ ಬೆಲೆ ಕ್ವಿಂಟಾಲ್‌ಗೆ 50 ಸಾವಿರಕ್ಕೆ ಕುಸಿದಿದೆ. ಇದಕ್ಕೆ ಕಾರಣ ವ್ಯಾಪಕ ಅಡಿಕೆ ಕಳ್ಳ ಸಾಗಣೆ. 2021ರ ಜೂನ್‌ನಲ್ಲಿ ಸಿಬಿಐ ದೇಶದ 19 ಗೋದಾಮುಗಳ ಮೇಲೆ ದಾಳಿ ನಡೆಸಿ ಅಡಿಕೆ ಕಳ್ಳಸಾಗಣೆಯನ್ನು ಪತ್ತೆಹಚ್ಚಿ ಕಾಳಸಂತೆಕೋರರನ್ನು ಬಂಧಿಸಿದ್ದರಿಂದ ಕುಸಿತ ಕಂಡಿದ್ದ ಅಡಿಕೆ ದರ ಏರಿಕೆಯಾಗಿತ್ತು. ಈಗ ಮತ್ತೆ ಕಳ್ಳಸಾಗಣೆ, ಕಾಳಸಂತೆ ಮಾರಾಟ ಹೆಚ್ಚಾಗಿ ಅಡಿಕೆ ದರ ಕುಸಿಯುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಮೇಲೆ ದಾಳಿ ನಡೆಸುತ್ತಿದೆ.

ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕೊಳೆರೋಗದಿಂದ ಕಂಗಾಲಾದ, ಮತ್ತಿತರ ಸಮಸ್ಯೆಗಳಿಗೆ ಸಿಲುಕಿದ್ದ ಅಡಿಕೆ ಬೆಳೆಗಾರರಿಗೆ 40 ಕೋಟಿ ರೂ ಪರಿಹಾರ ನೀಡಿತ್ತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಡಿಕೆ ಸುಲಿಯುವ ಯಂತ್ರ, ಸಂಸ್ಕರಣಾ ಯಂತ್ರ ಮತ್ತು ಘಟಕಗಳಿಗೆ ಸೇರಿದಂತೆ ಇನ್ನಿತರೆ ಅಗತ್ಯಗಳಿಗೆ ಸಬ್ಸಿಡಿ ನೀಡಿತ್ತು ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

5 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

5 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

6 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

8 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

20 hours ago