Advertisement
ಸುದ್ದಿಗಳು

ಸಿದ್ದು ಪರ ಪ್ರಚಾರ ಚೆನ್ನಾಗಿ ಆಗಿದೆ; ಆದರೆ ಪ್ರಾಮೀಸ್ ಸೋಮಣ್ಣ ಸ್ಪರ್ಧಿಸಿರೋದು ಗೊತ್ತಿರಲಿಲ್ಲ: ಶಿವಣ್ಣ

Share

ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ, ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದೆ. ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಹ್ಯಾಟ್ರಿಕ್  ಹೀರೋ ಶಿವರಾಜಕುಮಾರ ಸ್ಟಾರ್‌ ಕ್ಯಾಂಪೇನರ್ ಆಗಿ ಚುನಾವಣಾ ಅಖಾಡಕ್ಕಿಳಿಸಿದೆ. ಈ ಕುರಿತು ಮಾಧ್ಯಮಗಳ ಜತೆ ನಟ ಶಿವರಾಜಕುಮಾರ ಮಾತನಾಡಿದರು.

ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಪ್ರಚಾರ ಚೆನ್ನಾಗಿ ಆಗಿದೆ. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ಹೇಳಿದರು.

ನಾನೇನು ಚಿಕ್ಕ ಹುಡುಗನಾ? ನನಗೂ ಈಗ 61 ವರ್ಷ ಆಯ್ತು. ನನಗೆ ಯಾರು ಎನಿಮಿ‌ ಇಲ್ಲ.‌ ನನಗೆ ಎಲ್ಲರೂ ಸ್ನೇಹಿತರೆ. ರಾಹುಲ್ ಗಾಂಧಿ ಮೀಟ್ ಮಾಡಬೇಕು ಅಂತಾ ಮೊದಲಿನಿಂದ ಆಸೆ ಇತ್ತು.‌ ಮೊನ್ನೆ ಮೀಟ್ ಮಾಡಿದೆ. ರಾಹುಲ್ ಗಾಂಧಿ ಸ್ಮಾರ್ಟ್ ಆಗಿ ಇದ್ದಾರೆ ಎಂದು ಹೊಗಳಿದರು.

ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರೂ ಪ್ರಚಾರಕ್ಕೆ ಕರೆದಿರಲಿಲ್ಲ. ಕರೆದಿದ್ದರೆ ಅವರ ಪರ ಪ್ರಚಾರಕ್ಕೂ ಹೋಗ್ತಿದ್ದೆ. ಮೊದಲು ಸಿನಿಮಾದಲ್ಲಿ ಬಿಜಿ ಇದ್ದೆ.‌ ಈಗ ಪ್ರಚಾರದಲ್ಲಿ ಬಿಜಿ ಆಗಿದ್ದೇನೆ. ನನಗೆ ರಾಹುಲ್ ಗಾಂಧಿ ಪಿಟ್ನೆಸ್ ಇಷ್ಟ ಆಯ್ತು.‌ ಹೀಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದರು.

ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅದು ಯಾವುದೂ ಬರಲ್ಲ. ರಾಯಚೂರಿನಲ್ಲಿ ಒಬ್ಬರು ಸಾದಿಕ್ ಅಂತಾ ಇದ್ದಾರೆ. ಅಪ್ಪು ಜೀವಂತವಾಗಿ ಇದ್ದಾಗಲೂ ಕೆಲಸ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಆದರೆ ಅವರು ಯಾರೂ ಹೇಳಿಕೊಂಡು ಓಡಾಡಲ್ಲ. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ ಎಂದರು.

ಶಿವಣ್ಣಂಗೆ ಮಾತನಾಡಕ್ಕೆ ಆಗಲ್ಲ ಅಂತಾಲ್ಲ, ನನಗೂ ಮಾತನಾಡೋಕೆ ಬರುತ್ತೆ. ಬಿಜೆಪಿ ಪರವಾಗಿ ಸುದೀಪ್ ಅವರು ಪ್ರಚಾರಕ್ಕೆ ಹೋಗ್ತಿದ್ದಾರೆ. ಹಾಗಂತ ನಾಳೆ ನಾನು ಸುದೀಪ್ ಅವರನ್ನು ಮಾತನಾಡಿಸಲು ಆಗಲ್ವಾ. ನಾನು ಸುದೀಪ್ ಕ್ಲೋಸ್ ಫ್ರೆಂಡ್ಸ್ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

12 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

17 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago