ಸುದ್ದಿಗಳು

ಸಿದ್ದು ಪರ ಪ್ರಚಾರ ಚೆನ್ನಾಗಿ ಆಗಿದೆ; ಆದರೆ ಪ್ರಾಮೀಸ್ ಸೋಮಣ್ಣ ಸ್ಪರ್ಧಿಸಿರೋದು ಗೊತ್ತಿರಲಿಲ್ಲ: ಶಿವಣ್ಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ, ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದೆ. ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಹ್ಯಾಟ್ರಿಕ್  ಹೀರೋ ಶಿವರಾಜಕುಮಾರ ಸ್ಟಾರ್‌ ಕ್ಯಾಂಪೇನರ್ ಆಗಿ ಚುನಾವಣಾ ಅಖಾಡಕ್ಕಿಳಿಸಿದೆ. ಈ ಕುರಿತು ಮಾಧ್ಯಮಗಳ ಜತೆ ನಟ ಶಿವರಾಜಕುಮಾರ ಮಾತನಾಡಿದರು.

Advertisement

ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಪ್ರಚಾರ ಚೆನ್ನಾಗಿ ಆಗಿದೆ. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ಹೇಳಿದರು.

Advertisement

ನಾನೇನು ಚಿಕ್ಕ ಹುಡುಗನಾ? ನನಗೂ ಈಗ 61 ವರ್ಷ ಆಯ್ತು. ನನಗೆ ಯಾರು ಎನಿಮಿ‌ ಇಲ್ಲ.‌ ನನಗೆ ಎಲ್ಲರೂ ಸ್ನೇಹಿತರೆ. ರಾಹುಲ್ ಗಾಂಧಿ ಮೀಟ್ ಮಾಡಬೇಕು ಅಂತಾ ಮೊದಲಿನಿಂದ ಆಸೆ ಇತ್ತು.‌ ಮೊನ್ನೆ ಮೀಟ್ ಮಾಡಿದೆ. ರಾಹುಲ್ ಗಾಂಧಿ ಸ್ಮಾರ್ಟ್ ಆಗಿ ಇದ್ದಾರೆ ಎಂದು ಹೊಗಳಿದರು.

ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರೂ ಪ್ರಚಾರಕ್ಕೆ ಕರೆದಿರಲಿಲ್ಲ. ಕರೆದಿದ್ದರೆ ಅವರ ಪರ ಪ್ರಚಾರಕ್ಕೂ ಹೋಗ್ತಿದ್ದೆ. ಮೊದಲು ಸಿನಿಮಾದಲ್ಲಿ ಬಿಜಿ ಇದ್ದೆ.‌ ಈಗ ಪ್ರಚಾರದಲ್ಲಿ ಬಿಜಿ ಆಗಿದ್ದೇನೆ. ನನಗೆ ರಾಹುಲ್ ಗಾಂಧಿ ಪಿಟ್ನೆಸ್ ಇಷ್ಟ ಆಯ್ತು.‌ ಹೀಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದರು.

ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅದು ಯಾವುದೂ ಬರಲ್ಲ. ರಾಯಚೂರಿನಲ್ಲಿ ಒಬ್ಬರು ಸಾದಿಕ್ ಅಂತಾ ಇದ್ದಾರೆ. ಅಪ್ಪು ಜೀವಂತವಾಗಿ ಇದ್ದಾಗಲೂ ಕೆಲಸ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಆದರೆ ಅವರು ಯಾರೂ ಹೇಳಿಕೊಂಡು ಓಡಾಡಲ್ಲ. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ ಎಂದರು.

Advertisement

ಶಿವಣ್ಣಂಗೆ ಮಾತನಾಡಕ್ಕೆ ಆಗಲ್ಲ ಅಂತಾಲ್ಲ, ನನಗೂ ಮಾತನಾಡೋಕೆ ಬರುತ್ತೆ. ಬಿಜೆಪಿ ಪರವಾಗಿ ಸುದೀಪ್ ಅವರು ಪ್ರಚಾರಕ್ಕೆ ಹೋಗ್ತಿದ್ದಾರೆ. ಹಾಗಂತ ನಾಳೆ ನಾನು ಸುದೀಪ್ ಅವರನ್ನು ಮಾತನಾಡಿಸಲು ಆಗಲ್ವಾ. ನಾನು ಸುದೀಪ್ ಕ್ಲೋಸ್ ಫ್ರೆಂಡ್ಸ್ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ

ಶರಧಿ, 7 ನೇ ತರಗತಿ, ನವಚೇತನ ಆಂಗ್ಲಮಾಧ್ಯಮ ಶಾಲೆ, ವೇಣೂರು | - ದ ರೂರಲ್‌ ಮಿರರ್.ಕಾಂ

4 hours ago

ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |

ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ …

5 hours ago

‘ಗಗನ್ಯಾನ್’ಯೋಜನೆ ಶೇ. 80 ರಷ್ಟು ಪರೀಕ್ಷೆಗಳು ಪೂರ್ಣ | ಇಸ್ರೋ

ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನ 'ಗಗನ್ಯಾನ್'  ಪ್ರಗತಿಯಲ್ಲಿದೆ. 80% ಪರೀಕ್ಷೆಗಳು ಪೂರ್ಣಗೊಂಡಿವೆ,…

5 hours ago

ಬೆಂಗಳೂರಿನಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆ

ಬೆಂಗಳೂರಿನ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್‌ಗಳಾಗಿ ವಿಂಗಡಿಸಿ, ಟೆಂಡರ್…

5 hours ago