Advertisement
ಸುದ್ದಿಗಳು

ಸಿದ್ದು ಪರ ಪ್ರಚಾರ ಚೆನ್ನಾಗಿ ಆಗಿದೆ; ಆದರೆ ಪ್ರಾಮೀಸ್ ಸೋಮಣ್ಣ ಸ್ಪರ್ಧಿಸಿರೋದು ಗೊತ್ತಿರಲಿಲ್ಲ: ಶಿವಣ್ಣ

Share

ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ, ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದೆ. ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಹ್ಯಾಟ್ರಿಕ್  ಹೀರೋ ಶಿವರಾಜಕುಮಾರ ಸ್ಟಾರ್‌ ಕ್ಯಾಂಪೇನರ್ ಆಗಿ ಚುನಾವಣಾ ಅಖಾಡಕ್ಕಿಳಿಸಿದೆ. ಈ ಕುರಿತು ಮಾಧ್ಯಮಗಳ ಜತೆ ನಟ ಶಿವರಾಜಕುಮಾರ ಮಾತನಾಡಿದರು.

ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಪ್ರಚಾರ ಚೆನ್ನಾಗಿ ಆಗಿದೆ. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ಹೇಳಿದರು.

ನಾನೇನು ಚಿಕ್ಕ ಹುಡುಗನಾ? ನನಗೂ ಈಗ 61 ವರ್ಷ ಆಯ್ತು. ನನಗೆ ಯಾರು ಎನಿಮಿ‌ ಇಲ್ಲ.‌ ನನಗೆ ಎಲ್ಲರೂ ಸ್ನೇಹಿತರೆ. ರಾಹುಲ್ ಗಾಂಧಿ ಮೀಟ್ ಮಾಡಬೇಕು ಅಂತಾ ಮೊದಲಿನಿಂದ ಆಸೆ ಇತ್ತು.‌ ಮೊನ್ನೆ ಮೀಟ್ ಮಾಡಿದೆ. ರಾಹುಲ್ ಗಾಂಧಿ ಸ್ಮಾರ್ಟ್ ಆಗಿ ಇದ್ದಾರೆ ಎಂದು ಹೊಗಳಿದರು.

ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರೂ ಪ್ರಚಾರಕ್ಕೆ ಕರೆದಿರಲಿಲ್ಲ. ಕರೆದಿದ್ದರೆ ಅವರ ಪರ ಪ್ರಚಾರಕ್ಕೂ ಹೋಗ್ತಿದ್ದೆ. ಮೊದಲು ಸಿನಿಮಾದಲ್ಲಿ ಬಿಜಿ ಇದ್ದೆ.‌ ಈಗ ಪ್ರಚಾರದಲ್ಲಿ ಬಿಜಿ ಆಗಿದ್ದೇನೆ. ನನಗೆ ರಾಹುಲ್ ಗಾಂಧಿ ಪಿಟ್ನೆಸ್ ಇಷ್ಟ ಆಯ್ತು.‌ ಹೀಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದರು.

ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅದು ಯಾವುದೂ ಬರಲ್ಲ. ರಾಯಚೂರಿನಲ್ಲಿ ಒಬ್ಬರು ಸಾದಿಕ್ ಅಂತಾ ಇದ್ದಾರೆ. ಅಪ್ಪು ಜೀವಂತವಾಗಿ ಇದ್ದಾಗಲೂ ಕೆಲಸ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಆದರೆ ಅವರು ಯಾರೂ ಹೇಳಿಕೊಂಡು ಓಡಾಡಲ್ಲ. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ ಎಂದರು.

ಶಿವಣ್ಣಂಗೆ ಮಾತನಾಡಕ್ಕೆ ಆಗಲ್ಲ ಅಂತಾಲ್ಲ, ನನಗೂ ಮಾತನಾಡೋಕೆ ಬರುತ್ತೆ. ಬಿಜೆಪಿ ಪರವಾಗಿ ಸುದೀಪ್ ಅವರು ಪ್ರಚಾರಕ್ಕೆ ಹೋಗ್ತಿದ್ದಾರೆ. ಹಾಗಂತ ನಾಳೆ ನಾನು ಸುದೀಪ್ ಅವರನ್ನು ಮಾತನಾಡಿಸಲು ಆಗಲ್ವಾ. ನಾನು ಸುದೀಪ್ ಕ್ಲೋಸ್ ಫ್ರೆಂಡ್ಸ್ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

13 minutes ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

7 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

15 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

16 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago