Advertisement
ಸುದ್ದಿಗಳು

ಸಿದ್ದು ಪರ ಪ್ರಚಾರ ಚೆನ್ನಾಗಿ ಆಗಿದೆ; ಆದರೆ ಪ್ರಾಮೀಸ್ ಸೋಮಣ್ಣ ಸ್ಪರ್ಧಿಸಿರೋದು ಗೊತ್ತಿರಲಿಲ್ಲ: ಶಿವಣ್ಣ

Share

ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ, ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದೆ. ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಹ್ಯಾಟ್ರಿಕ್  ಹೀರೋ ಶಿವರಾಜಕುಮಾರ ಸ್ಟಾರ್‌ ಕ್ಯಾಂಪೇನರ್ ಆಗಿ ಚುನಾವಣಾ ಅಖಾಡಕ್ಕಿಳಿಸಿದೆ. ಈ ಕುರಿತು ಮಾಧ್ಯಮಗಳ ಜತೆ ನಟ ಶಿವರಾಜಕುಮಾರ ಮಾತನಾಡಿದರು.

ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಪ್ರಚಾರ ಚೆನ್ನಾಗಿ ಆಗಿದೆ. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ಹೇಳಿದರು.

ನಾನೇನು ಚಿಕ್ಕ ಹುಡುಗನಾ? ನನಗೂ ಈಗ 61 ವರ್ಷ ಆಯ್ತು. ನನಗೆ ಯಾರು ಎನಿಮಿ‌ ಇಲ್ಲ.‌ ನನಗೆ ಎಲ್ಲರೂ ಸ್ನೇಹಿತರೆ. ರಾಹುಲ್ ಗಾಂಧಿ ಮೀಟ್ ಮಾಡಬೇಕು ಅಂತಾ ಮೊದಲಿನಿಂದ ಆಸೆ ಇತ್ತು.‌ ಮೊನ್ನೆ ಮೀಟ್ ಮಾಡಿದೆ. ರಾಹುಲ್ ಗಾಂಧಿ ಸ್ಮಾರ್ಟ್ ಆಗಿ ಇದ್ದಾರೆ ಎಂದು ಹೊಗಳಿದರು.

ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರೂ ಪ್ರಚಾರಕ್ಕೆ ಕರೆದಿರಲಿಲ್ಲ. ಕರೆದಿದ್ದರೆ ಅವರ ಪರ ಪ್ರಚಾರಕ್ಕೂ ಹೋಗ್ತಿದ್ದೆ. ಮೊದಲು ಸಿನಿಮಾದಲ್ಲಿ ಬಿಜಿ ಇದ್ದೆ.‌ ಈಗ ಪ್ರಚಾರದಲ್ಲಿ ಬಿಜಿ ಆಗಿದ್ದೇನೆ. ನನಗೆ ರಾಹುಲ್ ಗಾಂಧಿ ಪಿಟ್ನೆಸ್ ಇಷ್ಟ ಆಯ್ತು.‌ ಹೀಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದರು.

ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅದು ಯಾವುದೂ ಬರಲ್ಲ. ರಾಯಚೂರಿನಲ್ಲಿ ಒಬ್ಬರು ಸಾದಿಕ್ ಅಂತಾ ಇದ್ದಾರೆ. ಅಪ್ಪು ಜೀವಂತವಾಗಿ ಇದ್ದಾಗಲೂ ಕೆಲಸ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಆದರೆ ಅವರು ಯಾರೂ ಹೇಳಿಕೊಂಡು ಓಡಾಡಲ್ಲ. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ ಎಂದರು.

ಶಿವಣ್ಣಂಗೆ ಮಾತನಾಡಕ್ಕೆ ಆಗಲ್ಲ ಅಂತಾಲ್ಲ, ನನಗೂ ಮಾತನಾಡೋಕೆ ಬರುತ್ತೆ. ಬಿಜೆಪಿ ಪರವಾಗಿ ಸುದೀಪ್ ಅವರು ಪ್ರಚಾರಕ್ಕೆ ಹೋಗ್ತಿದ್ದಾರೆ. ಹಾಗಂತ ನಾಳೆ ನಾನು ಸುದೀಪ್ ಅವರನ್ನು ಮಾತನಾಡಿಸಲು ಆಗಲ್ವಾ. ನಾನು ಸುದೀಪ್ ಕ್ಲೋಸ್ ಫ್ರೆಂಡ್ಸ್ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

18 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago