ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮತದಾರರಿಗೆ ಮನವಿ

April 19, 2023
4:38 PM

ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ  ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ಬಿಜೆಪಿ ಅವರು ಬೆಂಗಳೂರಿನ ನಿವಾಸಿ ಸೋಮಣ್ಣ ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ – ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ನನ್ನು ಕಣಕ್ಕೆ ಇಳಿಸಿರೋದು ದಲಿತರ ಮತ ಛಿದ್ರ ಮಾಡುವ ಷಡ್ಯಂತ್ರ. ನನ್ನನ್ನ ಸೋಲಿಸಲು ಬಿಜೆಪಿ-ಜೆಡಿಎಸ್‌ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.

ಬಿಜೆಪಿಯಲ್ಲಿ ಹಿರಿಯರಿಗೆ ಗೌರವವಿಲ್ಲ, ಜಗದೀಶ್‌ ಶೆಟ್ಟರ್‌, ಲಕ್ಷ್ಮಣ ಸವದಿಗೆ ಟಿಕೆಟ್‌ ಕೊಡಲಿಲ್ಲ. ಇಡೀ ರಾಜ್ಯದಲ್ಲಿ ಈಗ ಕಾಂಗ್ರೆಸ್‌ ಪರ ಗಾಳಿ ಬೀಸಿದೆ. ವರುಣಾ ಜನತೆಗೆ ಎಷ್ಟೇ ಕೋಟಿ ಕೊಟ್ಟರೂ ಅದನ್ನ ಕಾಲಕಸದಂತೆ ಕಾಣುತ್ತಾರೆ ಅನ್ನೋದು ನನಗೆ ಗೊತ್ತಿದೆ. ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror