ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.
ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.
ಬಿಜೆಪಿ ಅವರು ಬೆಂಗಳೂರಿನ ನಿವಾಸಿ ಸೋಮಣ್ಣ ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ – ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ನನ್ನು ಕಣಕ್ಕೆ ಇಳಿಸಿರೋದು ದಲಿತರ ಮತ ಛಿದ್ರ ಮಾಡುವ ಷಡ್ಯಂತ್ರ. ನನ್ನನ್ನ ಸೋಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.
ಬಿಜೆಪಿಯಲ್ಲಿ ಹಿರಿಯರಿಗೆ ಗೌರವವಿಲ್ಲ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಟಿಕೆಟ್ ಕೊಡಲಿಲ್ಲ. ಇಡೀ ರಾಜ್ಯದಲ್ಲಿ ಈಗ ಕಾಂಗ್ರೆಸ್ ಪರ ಗಾಳಿ ಬೀಸಿದೆ. ವರುಣಾ ಜನತೆಗೆ ಎಷ್ಟೇ ಕೋಟಿ ಕೊಟ್ಟರೂ ಅದನ್ನ ಕಾಲಕಸದಂತೆ ಕಾಣುತ್ತಾರೆ ಅನ್ನೋದು ನನಗೆ ಗೊತ್ತಿದೆ. ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಕೋರಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…