Advertisement
ಸುದ್ದಿಗಳು

ಹೈವೋಲ್ಟೇಜ್ ಕ್ಷೇತ್ರ ವರುಣಾ | ಯಾರೇ ಬಂದ್ರೂ ಇಲ್ಲಿ ಗೆಲವು ನಂದೇ – ಸಿದ್ರಾಮಣ್ಣ| ಸ್ವಾಮೀಜಿ ಆಶೀರ್ವಾದ ಪಡೆದ ಸೋಮಣ್ಣ |

Share

ಜಿದ್ದಾಜಿದ್ದಿ ಕ್ಷೇತರವಾಗಿರುವ ವರುಣಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದಾರೆ.  ಸಿದ್ದು ವಿರುದ್ಧ ವರುಣಾದಿಂದ ಪ್ರಬಲ ಲಿಂಗಾಯತ ನಾಯಕ ಸೋಮಣ್ಣ ಅವರನ್ನು ಕಣಕ್ಕಿಳಿದಿರುವುದರಿಂದ ಹೈವೋಲ್ಟೇಜ್ ಕಣವಾಗಿದೆ.

Advertisement
Advertisement

ಉಭಯ ನಾಯಕರು ಗುರುವಾರ ಮಠಗಳಿಗೆ ಭೇಟಿ ನೀಡಿದ್ದು, ತಮ್ಮ ಪಕ್ಷದ  ಹಿರಿಯ ನಾಯಕರನ್ನು ಭೇಟಿ ನೀಡಿದ್ದರು. ಸೋಮಣ್ಣ ಅವರು ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ನಂತರ ಹಿರಿಯ ಬಿಜೆಪಿ ನಾಯಕ ಮತ್ತು ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿದರು. ಶ್ರೀನಿವಾಸ ಪ್ರಸಾದ್ ಅವರನ್ನು ಸಿದ್ದರಾಮಯ್ಯನವರ ಪರಮ ಪ್ರತಿಸ್ಪರ್ಧಿ ಎಂದು ಪರಿಗಣಿಸಲಾಗಿದೆ.

Advertisement

ಸೋಮಣ್ಣ ಮತ್ತು ಶ್ರೀನಿವಾಸ ಪ್ರಸಾದ್ ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ತಂತ್ರಗಳನ್ನು ಅನುಸರಿಸಬೇಕು ಎಂದು ಚರ್ಚಿಸಿದರು ಎಂದು ತಿಳಿದುಬಂದಿದೆ. ಸೋಮಣ್ಣ ಅವರು ಜೆಎಸ್‌ಎಸ್ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಸಚಿವರು ವರುಣಾದ ಪ್ರಮುಖ ಪಕ್ಷದ ಮುಖಂಡರ ಜತೆಯೂ ಸಭೆ ನಡೆಸಿದರು. “ನಾನು ಏಪ್ರಿಲ್ 17 ರಂದು ನನ್ನ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ. ನಾನು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನನ್ನೊಂದಿಗೆ ಬರಲು ಆಹ್ವಾನಿಸುತ್ತೇನೆ ಎಂದು ಹೇಳಿದರು. ಸೋಮಣ್ಣ ಕೂಡ ಕಾರ್ಯ ಗ್ರಾಮದಿಂದಲೇ ಪ್ರಚಾರ ಆರಂಭಿಸುವುದಾಗಿ ತಿಳಿಸಿದರು. ನನ್ನ ವಿರುದ್ಧ ಯಾರು ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ ಎಂದರು.

ನಂತರ ಬಿಜೆಪಿ ಕಚೇರಿಯಲ್ಲಿ ಬಿ ಫಾರಂ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಡಬಲ್ ಇಂಜಿನ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಲ್ಯಾಣ ಕಾರ್ಯಕ್ರಮಗಳು ಜನರಿಗೆ ತಲುಪಿವೆ. ಒಳಮೀಸಲಾತಿ ಕುರಿತ ಸದಾಶಿವ ಆಯೋಗದ ವರದಿ ದಶಕಗಳಿಂದ ಕಾಗದದಲ್ಲಿಯೇ ಉಳಿದಿತ್ತು. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಾರ್ಯರೂಪಕ್ಕೆ ಬಂತು ಎಂದರು.

Advertisement

ಬೆಂಗಳೂರಿನ ಜನ ನನ್ನನ್ನು ಪಕ್ಷದ ಕಾರ್ಯಕರ್ತನಿಂದ ಮಂತ್ರಿವರೆಗೂ ಬೆಳೆಸಿದರು. ವರುಣಾ ಮತ್ತು ಚಾಮರಾಜನಗರದ ಮತದಾರರು ಸಹ ಅದೇ ಬೆಂಬಲವನ್ನು ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು  ಹೇಳಿದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ವರುಣಾದಿಂದ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಡಿ ಎಂದು  ಸೂಚಿಸಿಲ್ಲ ಎಂದರು. ವಿಜಯೇಂದ್ರ ಈಗ ಬಂದರೂ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇನೆ,’’ ಎಂದರು.

ಇದೇ ವೇಳೆ ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿ ಸಿದ್ದರಾಮಯ್ಯ ಚಾಮುಂಡೇಶ್ವರಿಯಿಂದ ಪ್ರಚಾರ ಆರಂಭಿಸಿದರು. ‘ಜನರ ಬೆಂಬಲದಿಂದ ಗೆಲ್ಲುತ್ತೇನೆ. ನನ್ನ ವಿರುದ್ಧ ಸೋಮಣ್ಣ ಅಥವಾ ಯಾರಾದರೂ ಸ್ಪರ್ಧಿಸಲಿ… ಹಣಬಲ ನನ್ನ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ವರುಣಾದ ಜನರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇರುವುದರಿಂದ ಎದುರಾಳಿಯ ಚಿಂತೆಯಿಲ್ಲ ಎಂದು ಮಾಜಿ ಸಿಎಂ ಹೇಳಿದರು.

Advertisement

ತಮ್ಮ ಪುತ್ರ ಡಾ.ಯತೀಂದ್ರ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಎರಡನೇ ಸ್ಥಾನದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಲಿದೆ. ಅವಕಾಶ ನೀಡಿದರೆ ಕೋಲಾರದಿಂದ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ವರುಣಾದಲ್ಲಿಯೇ ಇದ್ದು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಾದ್ಯಂತ ಪ್ರಚಾರ ಮಾಡಲಿರುವ ಸಿದ್ದರಾಮಯ್ಯ ಕೇವಲ ಒಂದು ದಿನದ ಮಟ್ಟಿಗೆ ವರುಣಾದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.ಸಿದ್ದರಾಮಯ್ಯ ಅವರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರೊಂದಿಗೆ  ಮಾತುಕತೆ ನಡೆಸಿದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

3 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

3 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

4 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

4 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

4 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

4 hours ago