Advertisement
Political mirror

ವರುಣಾದಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್ | ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ…? |

Share

ಮಾಜಿ ಸಿಎಂ ಜೊತೆಗೆ ಮುಂದಿನ ಸಿಎಂ ಆಕಾಂಕ್ಷಿ ಸಿದ್ದರಾಮಯ್ಯ. ಈಗ ಮತ್ತೆ ವರುಣಾದಲ್ಲಿ  ಸ್ಫರ್ಧಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ಚುನಾವಣಾ ಕಣದಲ್ಲಿ ಕಟ್ಟಿ ಹಾಕಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈಗ ಪ್ರಬಲ ಅಭ್ಯರ್ಥಿಯ ಅಸ್ತ್ರವನ್ನು ಬಿಡಲು ಬಿಜೆಪಿ ಸಿದ್ಧವಾಗಿದೆ.ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು, ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಮೊದಲು ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ವಿಜಯೇಂದ್ರ ಅವರನ್ನು ತಮ್ಮ ಸ್ವಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಸಲು ಬಯಸಿದ್ದಾರೆ.

ಬಿಜೆಪಿ ಇದೀಗ ಮತ್ತೋರ್ವ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸುತ್ತಿದ್ದು, ವಸತಿ ಸಚಿವ ವಿ. ಸೋಮಣ್ಣ ಅವರತ್ತ ದೃಷ್ಟಿ ಹರಿಸಿದೆ. ಇದಕ್ಕೆ ವರುಣಾ ಕ್ಷೇತ್ರದಲ್ಲಿರುವ ಲಿಂಗಾಯತ ಸಮುದಾಯದ ಪ್ರಾಬಲ್ಯ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ವಿ. ಸೋಮಣ್ಣ, ವರುಣಾ ಕ್ಷೇತ್ರದ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಸಮರ್ಥರು ಎಂಬುದು ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

5 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

7 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

12 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

13 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

20 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

21 hours ago