Advertisement
Political mirror

ವರುಣಾದಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್ | ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ…? |

Share

ಮಾಜಿ ಸಿಎಂ ಜೊತೆಗೆ ಮುಂದಿನ ಸಿಎಂ ಆಕಾಂಕ್ಷಿ ಸಿದ್ದರಾಮಯ್ಯ. ಈಗ ಮತ್ತೆ ವರುಣಾದಲ್ಲಿ  ಸ್ಫರ್ಧಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ಚುನಾವಣಾ ಕಣದಲ್ಲಿ ಕಟ್ಟಿ ಹಾಕಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈಗ ಪ್ರಬಲ ಅಭ್ಯರ್ಥಿಯ ಅಸ್ತ್ರವನ್ನು ಬಿಡಲು ಬಿಜೆಪಿ ಸಿದ್ಧವಾಗಿದೆ.ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು, ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಮೊದಲು ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ವಿಜಯೇಂದ್ರ ಅವರನ್ನು ತಮ್ಮ ಸ್ವಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಸಲು ಬಯಸಿದ್ದಾರೆ.

ಬಿಜೆಪಿ ಇದೀಗ ಮತ್ತೋರ್ವ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸುತ್ತಿದ್ದು, ವಸತಿ ಸಚಿವ ವಿ. ಸೋಮಣ್ಣ ಅವರತ್ತ ದೃಷ್ಟಿ ಹರಿಸಿದೆ. ಇದಕ್ಕೆ ವರುಣಾ ಕ್ಷೇತ್ರದಲ್ಲಿರುವ ಲಿಂಗಾಯತ ಸಮುದಾಯದ ಪ್ರಾಬಲ್ಯ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ವಿ. ಸೋಮಣ್ಣ, ವರುಣಾ ಕ್ಷೇತ್ರದ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಸಮರ್ಥರು ಎಂಬುದು ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

4 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

4 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago