20.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…… ಮುಂದೆ ಓದಿ……
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ದಿನದಲ್ಲಿ ಸಣ್ಣ ಪ್ರಮಾಣದ 3, 4 ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 21 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 21 ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ
ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 20ರಂದು ಅದೂ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…