Advertisement
ವೆದರ್ ಮಿರರ್

ಹವಾಮಾನ ವರದಿ | 19-08-2025 | ಆ.20 ರ ನಂತರ “ಮಳೆ ಸಾಕಪ್ಪ…” ಎನ್ನುವವರು ಗಮನಿಸಿ..!

Share

20.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…… ಮುಂದೆ ಓದಿ……

ಕರಾವಳಿ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ದಿನದಲ್ಲಿ ಸಣ್ಣ ಪ್ರಮಾಣದ 3, 4 ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 21 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 21 ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.  ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 20ರಂದು ಅದೂ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

4 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

12 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

12 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

13 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

21 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

21 hours ago