ಮಂಗಳೂರಿಗೆ ಮೋದಿ ಭೇಟಿ ಕಾರ್ಯಕ್ರಮದಲ್ಲಿ ಬದಲಾವಣೆ | ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ |

April 10, 2024
8:51 PM

ದಿನದಿಂದ ದಿನಕ್ಕೆ ಲೋಕ ಸಭೆ ಚುನಾವಣೆಯ(Lok Sabha Election) ಕಾವು ಏರುತ್ತಿದೆ. ಬಿಜೆಪಿಯು ಮುಖ್ಯವಾಗಿ ನರೇಂದ್ರ ಮೋದಿ ಅವರನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಅದರಲ್ಲೂ ಮೋದಿಯವರು ಕರ್ನಾಟಕಕ್ಕೆ(Karnataka) ಭೇಟಿ ನೀಡುತ್ತಿರುವುದು ಬಿಜೆಪಿ ಕಾರ್ಯಕರ್ತರಿಗೆ ಜೋಶ್‌ ನೀಡುತ್ತಿದೆ.  ಬಿಜೆಪಿ ಬೆಲ್ಟ್‌ ದಕ್ಷಿಣಕನ್ನಡಕ್ಕಂತೂ(Dakshina Kannada) ಮೋದಿಯವರ ಭೇಟಿ ಕುತೂಹಲ ಮೂಡಿದೆ. ಆದರೆ  ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮತ್ತೆ ಮಹತ್ವದ ಬದಲಾವಣೆಯಾಗಿದೆ.

ಏಪ್ರಿಲ್14 ರಂದು ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಮಂಗಳೂರು (Mangaluru) ಬದಲು ಮೈಸೂರಿನಲ್ಲಿ (Mysuru) ಆಯೋಜಿಸಲಾಗಿದೆ. ಹಳೇಮೈಸೂರು (Old Mysuru) ಭಾಗದಲ್ಲಿ ಸಿದ್ದರಾಮಯ್ಯ (Siddaramaiah) ಟಾರ್ಗೆಟ್ ಮಾಡಿರುವ ದೋಸ್ತಿಗಳು ಮೈಸೂರಿಗೆ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಲು  ಮುಂದಾಗಿದ್ದಾರೆ. ಮೋದಿಯವರು ಏಪ್ರಿಲ್ 14 ರಂದು ಮೈಸೂರಿಗೆ ಸಂಜೆ 4 ಗಂಟೆಗೆ ಬರಲಿದ್ದಾರೆ. ಅಂದು ಮಹಾರಾಜ ಮೈದಾನದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತಾಡಲಿದ್ದಾರೆ.

ಹಳೇ ಮೈಸೂರಿನ ನಾಲ್ಕು ಲೋಕಕ್ಷೇತ್ರಗಳನ್ನು ಟಾರ್ಗೆಟ್ ಇಟ್ಟುಕೊಂಡು ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಿ ಯಶಸ್ವಿ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.  ಅಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋ (Road Show) ನಡೆಸಲಿದ್ದಾರೆ. ಮಂಗಳೂರಿನ ನಾರಾಯಣ ಗುರು ಸರ್ಕಲ್ ನಿಂದ ನವಭಾರತ ವೃತ್ತದವರೆಗೆ 1.5 ಕಿ.ಮೀ ವರೆಗೆ ಮೋದಿಯವರು ರೋಡ್ ಶೋ ನಡೆಸಲಿದ್ದಾರೆ. ಮೋದಿಯವರ ಜತೆ ರೋಡ್ ಶೋ ವೇಳೆ ಪಕ್ಷದ ಅಭ್ಯರ್ಥಿ ಮಾತ್ರ ಇರುವಂತೆ ಸೂಚಿಸಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror