ಮಂಗಳೂರಿಗೆ ಮೋದಿ ಭೇಟಿ ಕಾರ್ಯಕ್ರಮದಲ್ಲಿ ಬದಲಾವಣೆ | ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ |

April 10, 2024
8:51 PM

ದಿನದಿಂದ ದಿನಕ್ಕೆ ಲೋಕ ಸಭೆ ಚುನಾವಣೆಯ(Lok Sabha Election) ಕಾವು ಏರುತ್ತಿದೆ. ಬಿಜೆಪಿಯು ಮುಖ್ಯವಾಗಿ ನರೇಂದ್ರ ಮೋದಿ ಅವರನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಅದರಲ್ಲೂ ಮೋದಿಯವರು ಕರ್ನಾಟಕಕ್ಕೆ(Karnataka) ಭೇಟಿ ನೀಡುತ್ತಿರುವುದು ಬಿಜೆಪಿ ಕಾರ್ಯಕರ್ತರಿಗೆ ಜೋಶ್‌ ನೀಡುತ್ತಿದೆ.  ಬಿಜೆಪಿ ಬೆಲ್ಟ್‌ ದಕ್ಷಿಣಕನ್ನಡಕ್ಕಂತೂ(Dakshina Kannada) ಮೋದಿಯವರ ಭೇಟಿ ಕುತೂಹಲ ಮೂಡಿದೆ. ಆದರೆ  ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮತ್ತೆ ಮಹತ್ವದ ಬದಲಾವಣೆಯಾಗಿದೆ.

ಏಪ್ರಿಲ್14 ರಂದು ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಮಂಗಳೂರು (Mangaluru) ಬದಲು ಮೈಸೂರಿನಲ್ಲಿ (Mysuru) ಆಯೋಜಿಸಲಾಗಿದೆ. ಹಳೇಮೈಸೂರು (Old Mysuru) ಭಾಗದಲ್ಲಿ ಸಿದ್ದರಾಮಯ್ಯ (Siddaramaiah) ಟಾರ್ಗೆಟ್ ಮಾಡಿರುವ ದೋಸ್ತಿಗಳು ಮೈಸೂರಿಗೆ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಲು  ಮುಂದಾಗಿದ್ದಾರೆ. ಮೋದಿಯವರು ಏಪ್ರಿಲ್ 14 ರಂದು ಮೈಸೂರಿಗೆ ಸಂಜೆ 4 ಗಂಟೆಗೆ ಬರಲಿದ್ದಾರೆ. ಅಂದು ಮಹಾರಾಜ ಮೈದಾನದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತಾಡಲಿದ್ದಾರೆ.

Advertisement

ಹಳೇ ಮೈಸೂರಿನ ನಾಲ್ಕು ಲೋಕಕ್ಷೇತ್ರಗಳನ್ನು ಟಾರ್ಗೆಟ್ ಇಟ್ಟುಕೊಂಡು ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಿ ಯಶಸ್ವಿ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.  ಅಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋ (Road Show) ನಡೆಸಲಿದ್ದಾರೆ. ಮಂಗಳೂರಿನ ನಾರಾಯಣ ಗುರು ಸರ್ಕಲ್ ನಿಂದ ನವಭಾರತ ವೃತ್ತದವರೆಗೆ 1.5 ಕಿ.ಮೀ ವರೆಗೆ ಮೋದಿಯವರು ರೋಡ್ ಶೋ ನಡೆಸಲಿದ್ದಾರೆ. ಮೋದಿಯವರ ಜತೆ ರೋಡ್ ಶೋ ವೇಳೆ ಪಕ್ಷದ ಅಭ್ಯರ್ಥಿ ಮಾತ್ರ ಇರುವಂತೆ ಸೂಚಿಸಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror