Advertisement
ಸುದ್ದಿಗಳು

ಮಂಗಳೂರಿಗೆ ಮೋದಿ ಭೇಟಿ ಕಾರ್ಯಕ್ರಮದಲ್ಲಿ ಬದಲಾವಣೆ | ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ |

Share

ದಿನದಿಂದ ದಿನಕ್ಕೆ ಲೋಕ ಸಭೆ ಚುನಾವಣೆಯ(Lok Sabha Election) ಕಾವು ಏರುತ್ತಿದೆ. ಬಿಜೆಪಿಯು ಮುಖ್ಯವಾಗಿ ನರೇಂದ್ರ ಮೋದಿ ಅವರನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಅದರಲ್ಲೂ ಮೋದಿಯವರು ಕರ್ನಾಟಕಕ್ಕೆ(Karnataka) ಭೇಟಿ ನೀಡುತ್ತಿರುವುದು ಬಿಜೆಪಿ ಕಾರ್ಯಕರ್ತರಿಗೆ ಜೋಶ್‌ ನೀಡುತ್ತಿದೆ.  ಬಿಜೆಪಿ ಬೆಲ್ಟ್‌ ದಕ್ಷಿಣಕನ್ನಡಕ್ಕಂತೂ(Dakshina Kannada) ಮೋದಿಯವರ ಭೇಟಿ ಕುತೂಹಲ ಮೂಡಿದೆ. ಆದರೆ  ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮತ್ತೆ ಮಹತ್ವದ ಬದಲಾವಣೆಯಾಗಿದೆ.

ಏಪ್ರಿಲ್14 ರಂದು ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಮಂಗಳೂರು (Mangaluru) ಬದಲು ಮೈಸೂರಿನಲ್ಲಿ (Mysuru) ಆಯೋಜಿಸಲಾಗಿದೆ. ಹಳೇಮೈಸೂರು (Old Mysuru) ಭಾಗದಲ್ಲಿ ಸಿದ್ದರಾಮಯ್ಯ (Siddaramaiah) ಟಾರ್ಗೆಟ್ ಮಾಡಿರುವ ದೋಸ್ತಿಗಳು ಮೈಸೂರಿಗೆ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಲು  ಮುಂದಾಗಿದ್ದಾರೆ. ಮೋದಿಯವರು ಏಪ್ರಿಲ್ 14 ರಂದು ಮೈಸೂರಿಗೆ ಸಂಜೆ 4 ಗಂಟೆಗೆ ಬರಲಿದ್ದಾರೆ. ಅಂದು ಮಹಾರಾಜ ಮೈದಾನದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತಾಡಲಿದ್ದಾರೆ.

ಹಳೇ ಮೈಸೂರಿನ ನಾಲ್ಕು ಲೋಕಕ್ಷೇತ್ರಗಳನ್ನು ಟಾರ್ಗೆಟ್ ಇಟ್ಟುಕೊಂಡು ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಿ ಯಶಸ್ವಿ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.  ಅಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋ (Road Show) ನಡೆಸಲಿದ್ದಾರೆ. ಮಂಗಳೂರಿನ ನಾರಾಯಣ ಗುರು ಸರ್ಕಲ್ ನಿಂದ ನವಭಾರತ ವೃತ್ತದವರೆಗೆ 1.5 ಕಿ.ಮೀ ವರೆಗೆ ಮೋದಿಯವರು ರೋಡ್ ಶೋ ನಡೆಸಲಿದ್ದಾರೆ. ಮೋದಿಯವರ ಜತೆ ರೋಡ್ ಶೋ ವೇಳೆ ಪಕ್ಷದ ಅಭ್ಯರ್ಥಿ ಮಾತ್ರ ಇರುವಂತೆ ಸೂಚಿಸಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

9 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago