ದಿನದಿಂದ ದಿನಕ್ಕೆ ಲೋಕ ಸಭೆ ಚುನಾವಣೆಯ(Lok Sabha Election) ಕಾವು ಏರುತ್ತಿದೆ. ಬಿಜೆಪಿಯು ಮುಖ್ಯವಾಗಿ ನರೇಂದ್ರ ಮೋದಿ ಅವರನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಅದರಲ್ಲೂ ಮೋದಿಯವರು ಕರ್ನಾಟಕಕ್ಕೆ(Karnataka) ಭೇಟಿ ನೀಡುತ್ತಿರುವುದು ಬಿಜೆಪಿ ಕಾರ್ಯಕರ್ತರಿಗೆ ಜೋಶ್ ನೀಡುತ್ತಿದೆ. ಬಿಜೆಪಿ ಬೆಲ್ಟ್ ದಕ್ಷಿಣಕನ್ನಡಕ್ಕಂತೂ(Dakshina Kannada) ಮೋದಿಯವರ ಭೇಟಿ ಕುತೂಹಲ ಮೂಡಿದೆ. ಆದರೆ ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮತ್ತೆ ಮಹತ್ವದ ಬದಲಾವಣೆಯಾಗಿದೆ.
ಏಪ್ರಿಲ್14 ರಂದು ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಮಂಗಳೂರು (Mangaluru) ಬದಲು ಮೈಸೂರಿನಲ್ಲಿ (Mysuru) ಆಯೋಜಿಸಲಾಗಿದೆ. ಹಳೇಮೈಸೂರು (Old Mysuru) ಭಾಗದಲ್ಲಿ ಸಿದ್ದರಾಮಯ್ಯ (Siddaramaiah) ಟಾರ್ಗೆಟ್ ಮಾಡಿರುವ ದೋಸ್ತಿಗಳು ಮೈಸೂರಿಗೆ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಮೋದಿಯವರು ಏಪ್ರಿಲ್ 14 ರಂದು ಮೈಸೂರಿಗೆ ಸಂಜೆ 4 ಗಂಟೆಗೆ ಬರಲಿದ್ದಾರೆ. ಅಂದು ಮಹಾರಾಜ ಮೈದಾನದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತಾಡಲಿದ್ದಾರೆ.
ಹಳೇ ಮೈಸೂರಿನ ನಾಲ್ಕು ಲೋಕಕ್ಷೇತ್ರಗಳನ್ನು ಟಾರ್ಗೆಟ್ ಇಟ್ಟುಕೊಂಡು ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಿ ಯಶಸ್ವಿ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ. ಅಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ (Road Show) ನಡೆಸಲಿದ್ದಾರೆ. ಮಂಗಳೂರಿನ ನಾರಾಯಣ ಗುರು ಸರ್ಕಲ್ ನಿಂದ ನವಭಾರತ ವೃತ್ತದವರೆಗೆ 1.5 ಕಿ.ಮೀ ವರೆಗೆ ಮೋದಿಯವರು ರೋಡ್ ಶೋ ನಡೆಸಲಿದ್ದಾರೆ. ಮೋದಿಯವರ ಜತೆ ರೋಡ್ ಶೋ ವೇಳೆ ಪಕ್ಷದ ಅಭ್ಯರ್ಥಿ ಮಾತ್ರ ಇರುವಂತೆ ಸೂಚಿಸಲಾಗಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…