Advertisement
ಸುದ್ದಿಗಳು

ಮಂಗಳೂರಿಗೆ ಮೋದಿ ಭೇಟಿ ಕಾರ್ಯಕ್ರಮದಲ್ಲಿ ಬದಲಾವಣೆ | ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ |

Share

ದಿನದಿಂದ ದಿನಕ್ಕೆ ಲೋಕ ಸಭೆ ಚುನಾವಣೆಯ(Lok Sabha Election) ಕಾವು ಏರುತ್ತಿದೆ. ಬಿಜೆಪಿಯು ಮುಖ್ಯವಾಗಿ ನರೇಂದ್ರ ಮೋದಿ ಅವರನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಅದರಲ್ಲೂ ಮೋದಿಯವರು ಕರ್ನಾಟಕಕ್ಕೆ(Karnataka) ಭೇಟಿ ನೀಡುತ್ತಿರುವುದು ಬಿಜೆಪಿ ಕಾರ್ಯಕರ್ತರಿಗೆ ಜೋಶ್‌ ನೀಡುತ್ತಿದೆ.  ಬಿಜೆಪಿ ಬೆಲ್ಟ್‌ ದಕ್ಷಿಣಕನ್ನಡಕ್ಕಂತೂ(Dakshina Kannada) ಮೋದಿಯವರ ಭೇಟಿ ಕುತೂಹಲ ಮೂಡಿದೆ. ಆದರೆ  ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮತ್ತೆ ಮಹತ್ವದ ಬದಲಾವಣೆಯಾಗಿದೆ.

ಏಪ್ರಿಲ್14 ರಂದು ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಮಂಗಳೂರು (Mangaluru) ಬದಲು ಮೈಸೂರಿನಲ್ಲಿ (Mysuru) ಆಯೋಜಿಸಲಾಗಿದೆ. ಹಳೇಮೈಸೂರು (Old Mysuru) ಭಾಗದಲ್ಲಿ ಸಿದ್ದರಾಮಯ್ಯ (Siddaramaiah) ಟಾರ್ಗೆಟ್ ಮಾಡಿರುವ ದೋಸ್ತಿಗಳು ಮೈಸೂರಿಗೆ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಲು  ಮುಂದಾಗಿದ್ದಾರೆ. ಮೋದಿಯವರು ಏಪ್ರಿಲ್ 14 ರಂದು ಮೈಸೂರಿಗೆ ಸಂಜೆ 4 ಗಂಟೆಗೆ ಬರಲಿದ್ದಾರೆ. ಅಂದು ಮಹಾರಾಜ ಮೈದಾನದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತಾಡಲಿದ್ದಾರೆ.

ಹಳೇ ಮೈಸೂರಿನ ನಾಲ್ಕು ಲೋಕಕ್ಷೇತ್ರಗಳನ್ನು ಟಾರ್ಗೆಟ್ ಇಟ್ಟುಕೊಂಡು ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಿ ಯಶಸ್ವಿ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.  ಅಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋ (Road Show) ನಡೆಸಲಿದ್ದಾರೆ. ಮಂಗಳೂರಿನ ನಾರಾಯಣ ಗುರು ಸರ್ಕಲ್ ನಿಂದ ನವಭಾರತ ವೃತ್ತದವರೆಗೆ 1.5 ಕಿ.ಮೀ ವರೆಗೆ ಮೋದಿಯವರು ರೋಡ್ ಶೋ ನಡೆಸಲಿದ್ದಾರೆ. ಮೋದಿಯವರ ಜತೆ ರೋಡ್ ಶೋ ವೇಳೆ ಪಕ್ಷದ ಅಭ್ಯರ್ಥಿ ಮಾತ್ರ ಇರುವಂತೆ ಸೂಚಿಸಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

6 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

12 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

12 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago