ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶದಲ್ಲಿ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸ್ವದೇಶದಲ್ಲಿಯೇ ಜಗತ್ತಿನ ಶೇಕಡ 30 ರಷ್ಟು ಮೊಬೈಲ್ಗಳು ತಯಾರಾಗುತ್ತಿವೆ. ಐಐಟಿ, ಐಐಐಟಿ ಸಂಸ್ಥೆಗಳಿಂದ ಹೆಚ್ಚಿನ ಜ್ಞಾನ ದೊರೆಯುತ್ತಿದ್ದು, ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದು ತಿಳಿಸಿದರು. ಭಾರತ ದೇಶ ಅತಿಹೆಚ್ಚು ಯುವಕರನ್ನು ಹೊಂದಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದೆ. ಜಿಲ್ಲೆಯಲ್ಲಿ 400 ಶಾಲೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…