ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶದಲ್ಲಿ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸ್ವದೇಶದಲ್ಲಿಯೇ ಜಗತ್ತಿನ ಶೇಕಡ 30 ರಷ್ಟು ಮೊಬೈಲ್ಗಳು ತಯಾರಾಗುತ್ತಿವೆ. ಐಐಟಿ, ಐಐಐಟಿ ಸಂಸ್ಥೆಗಳಿಂದ ಹೆಚ್ಚಿನ ಜ್ಞಾನ ದೊರೆಯುತ್ತಿದ್ದು, ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದು ತಿಳಿಸಿದರು. ಭಾರತ ದೇಶ ಅತಿಹೆಚ್ಚು ಯುವಕರನ್ನು ಹೊಂದಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದೆ. ಜಿಲ್ಲೆಯಲ್ಲಿ 400 ಶಾಲೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…