MIRROR FOCUS

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ ಬಹುದೊಡ್ಡ ಸವಾಲು. ಅಡಿಕೆ ಕಳ್ಳಸಾಗಾಣಿಕೆಯ ಕಾರಣದಿಂದ ಅಲ್ಲಿನ ಅಡಿಕೆ ಧಾರಣೆ ಕುಸಿತವಾಗಿದೆ. ಹೀಗಾಗಿ ಈಗ ಚುನಾವಣೆಯ ವೇಳೆ ಅಲ್ಲಿನ ಅಭ್ಯರ್ಥಿಗಳಿಗೆ ಅಡಿಕೆ ಕಳ್ಳಸಾಗಾಣಿಕೆಯೇ ಒಂದು ಇಶ್ಯೂ ಆಗಿದೆ. ಈಗ ಕೃಷಿಕರು ಪ್ರಶ್ನಿಸುತ್ತಿದ್ದಾರೆ.

Advertisement

ಅಡಿಕೆ ಅಕ್ರಮ ಸಾಗಾಟದ  ಸಮಸ್ಯೆ ಈಗ ಗಂಭೀರ ಸ್ವರೂಪದ ತಿರುವು ಪಡೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಈ ಕುರಿತು ಮೇಘಾಲಯ ಸರ್ಕಾರ ಮೌನ ವಹಿಸಿರುವುದನ್ನು ಕೆಲವು ರೈತರು ಪ್ರಶ್ನಿಸಿದ್ದಾರೆ. ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಮೂಲಕ ಅಕ್ರಮ ಅಡಿಕೆ ಸಾಗಾಟವು ಮೇಘಾಲಯದ ಕೆಲವು ಪ್ರದೇಶದ ಕೃಷಿಕರನ್ನು ಹಾಗೂ ವ್ಯಾಪಾರಿಗಳ ಮೇಲೂ ಪರಿಣಾಮ ಬೀರಿದೆ.ಹಲವು ಸಮಯಗಳಿಂದ ಈ ಕಳ್ಳಸಾಗಾಣಿಕೆಯಾಗುತ್ತಿದ್ದರೂ ಧಾರಣೆ ಕುಸಿತದ ಕಾರಣದಿಂದ ಅಡಿಕೆ ಪ್ರಮುಖ ಬೆಳೆಯಾಗಿರಲಿಲ್ಲ. ಆದರೆ ಈಚೆಗೆ ಕೆಲವು ಸಮಯಗಳಿಂದ ಧಾರಣೆ ಏರಿಕೆಯಾದ ಕಾರಣ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಹೀಗಾಗಿ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಮೇಘಾಲಯದ , ತ್ರಿಪುರಾದ ಕೃಷಿಕರು ಒತ್ತಾಯ ಮಾಡುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪನ್ಸೆಂಗ್ ಬಿ ಮಾರಾಕ್ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಸರ್ಕಾರ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ತಮ್ಮ ಅಡಿಕೆ ಬೆಳೆಯನ್ನು ಅವಲಂಬಿಸಿದ್ದಾರೆ. ಆದರೆ ಕಳ್ಳಸಾಗಾಣಿಕೆಯು ಇಲ್ಲಿನ ಕೃಷಿಕರ ಮೇಲೆ ಪರಿಣಾಮ ಬೀರುತ್ತಿದೆ, ಹಾಗಿದ್ದರೂ ಸರ್ಕಾರ, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯರು ಎದುರಿಸುತ್ತಿರುವ ಸಂಕಷ್ಟದ ಅರಿವಿದ್ದರೂ ಕಳ್ಳ ವ್ಯಾಪಾರವನ್ನು ಮುಂದುವರೆಸಿದ್ದಾರೆ, ರಾಜಕೀಯ ಪಕ್ಷಗಳು ಸೇರಿದಂತೆ ಅನೇಕ ಜನರು  ಕಳ್ಳಸಾಗಣೆಯ ವಿಷಯವನ್ನು ಎತ್ತಿದ್ದಾರೆ ಆದರೆ ಸಚಿವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ದೂರಿದ್ದಾರೆ.

The issue of illegal Arecanut  from Myanmar through Bangladesh has literally shaken the entire Meghalaya with many complaining that the same was affecting the entire trade.

Source : TST News

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

14 minutes ago

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

15 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

15 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

15 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

16 hours ago