Advertisement
MIRROR FOCUS

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

Share

ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ ಬಹುದೊಡ್ಡ ಸವಾಲು. ಅಡಿಕೆ ಕಳ್ಳಸಾಗಾಣಿಕೆಯ ಕಾರಣದಿಂದ ಅಲ್ಲಿನ ಅಡಿಕೆ ಧಾರಣೆ ಕುಸಿತವಾಗಿದೆ. ಹೀಗಾಗಿ ಈಗ ಚುನಾವಣೆಯ ವೇಳೆ ಅಲ್ಲಿನ ಅಭ್ಯರ್ಥಿಗಳಿಗೆ ಅಡಿಕೆ ಕಳ್ಳಸಾಗಾಣಿಕೆಯೇ ಒಂದು ಇಶ್ಯೂ ಆಗಿದೆ. ಈಗ ಕೃಷಿಕರು ಪ್ರಶ್ನಿಸುತ್ತಿದ್ದಾರೆ.

ಅಡಿಕೆ ಅಕ್ರಮ ಸಾಗಾಟದ  ಸಮಸ್ಯೆ ಈಗ ಗಂಭೀರ ಸ್ವರೂಪದ ತಿರುವು ಪಡೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಈ ಕುರಿತು ಮೇಘಾಲಯ ಸರ್ಕಾರ ಮೌನ ವಹಿಸಿರುವುದನ್ನು ಕೆಲವು ರೈತರು ಪ್ರಶ್ನಿಸಿದ್ದಾರೆ. ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಮೂಲಕ ಅಕ್ರಮ ಅಡಿಕೆ ಸಾಗಾಟವು ಮೇಘಾಲಯದ ಕೆಲವು ಪ್ರದೇಶದ ಕೃಷಿಕರನ್ನು ಹಾಗೂ ವ್ಯಾಪಾರಿಗಳ ಮೇಲೂ ಪರಿಣಾಮ ಬೀರಿದೆ.ಹಲವು ಸಮಯಗಳಿಂದ ಈ ಕಳ್ಳಸಾಗಾಣಿಕೆಯಾಗುತ್ತಿದ್ದರೂ ಧಾರಣೆ ಕುಸಿತದ ಕಾರಣದಿಂದ ಅಡಿಕೆ ಪ್ರಮುಖ ಬೆಳೆಯಾಗಿರಲಿಲ್ಲ. ಆದರೆ ಈಚೆಗೆ ಕೆಲವು ಸಮಯಗಳಿಂದ ಧಾರಣೆ ಏರಿಕೆಯಾದ ಕಾರಣ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಹೀಗಾಗಿ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಮೇಘಾಲಯದ , ತ್ರಿಪುರಾದ ಕೃಷಿಕರು ಒತ್ತಾಯ ಮಾಡುತ್ತಿದ್ದಾರೆ.

Advertisement

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪನ್ಸೆಂಗ್ ಬಿ ಮಾರಾಕ್ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಸರ್ಕಾರ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ತಮ್ಮ ಅಡಿಕೆ ಬೆಳೆಯನ್ನು ಅವಲಂಬಿಸಿದ್ದಾರೆ. ಆದರೆ ಕಳ್ಳಸಾಗಾಣಿಕೆಯು ಇಲ್ಲಿನ ಕೃಷಿಕರ ಮೇಲೆ ಪರಿಣಾಮ ಬೀರುತ್ತಿದೆ, ಹಾಗಿದ್ದರೂ ಸರ್ಕಾರ, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯರು ಎದುರಿಸುತ್ತಿರುವ ಸಂಕಷ್ಟದ ಅರಿವಿದ್ದರೂ ಕಳ್ಳ ವ್ಯಾಪಾರವನ್ನು ಮುಂದುವರೆಸಿದ್ದಾರೆ, ರಾಜಕೀಯ ಪಕ್ಷಗಳು ಸೇರಿದಂತೆ ಅನೇಕ ಜನರು  ಕಳ್ಳಸಾಗಣೆಯ ವಿಷಯವನ್ನು ಎತ್ತಿದ್ದಾರೆ ಆದರೆ ಸಚಿವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ದೂರಿದ್ದಾರೆ.

The issue of illegal Arecanut  from Myanmar through Bangladesh has literally shaken the entire Meghalaya with many complaining that the same was affecting the entire trade.

Advertisement

Source : TST News

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

11 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

12 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago