Advertisement
MIRROR FOCUS

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

Share

ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ ಬಹುದೊಡ್ಡ ಸವಾಲು. ಅಡಿಕೆ ಕಳ್ಳಸಾಗಾಣಿಕೆಯ ಕಾರಣದಿಂದ ಅಲ್ಲಿನ ಅಡಿಕೆ ಧಾರಣೆ ಕುಸಿತವಾಗಿದೆ. ಹೀಗಾಗಿ ಈಗ ಚುನಾವಣೆಯ ವೇಳೆ ಅಲ್ಲಿನ ಅಭ್ಯರ್ಥಿಗಳಿಗೆ ಅಡಿಕೆ ಕಳ್ಳಸಾಗಾಣಿಕೆಯೇ ಒಂದು ಇಶ್ಯೂ ಆಗಿದೆ. ಈಗ ಕೃಷಿಕರು ಪ್ರಶ್ನಿಸುತ್ತಿದ್ದಾರೆ.

ಅಡಿಕೆ ಅಕ್ರಮ ಸಾಗಾಟದ  ಸಮಸ್ಯೆ ಈಗ ಗಂಭೀರ ಸ್ವರೂಪದ ತಿರುವು ಪಡೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಈ ಕುರಿತು ಮೇಘಾಲಯ ಸರ್ಕಾರ ಮೌನ ವಹಿಸಿರುವುದನ್ನು ಕೆಲವು ರೈತರು ಪ್ರಶ್ನಿಸಿದ್ದಾರೆ. ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಮೂಲಕ ಅಕ್ರಮ ಅಡಿಕೆ ಸಾಗಾಟವು ಮೇಘಾಲಯದ ಕೆಲವು ಪ್ರದೇಶದ ಕೃಷಿಕರನ್ನು ಹಾಗೂ ವ್ಯಾಪಾರಿಗಳ ಮೇಲೂ ಪರಿಣಾಮ ಬೀರಿದೆ.ಹಲವು ಸಮಯಗಳಿಂದ ಈ ಕಳ್ಳಸಾಗಾಣಿಕೆಯಾಗುತ್ತಿದ್ದರೂ ಧಾರಣೆ ಕುಸಿತದ ಕಾರಣದಿಂದ ಅಡಿಕೆ ಪ್ರಮುಖ ಬೆಳೆಯಾಗಿರಲಿಲ್ಲ. ಆದರೆ ಈಚೆಗೆ ಕೆಲವು ಸಮಯಗಳಿಂದ ಧಾರಣೆ ಏರಿಕೆಯಾದ ಕಾರಣ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಹೀಗಾಗಿ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಮೇಘಾಲಯದ , ತ್ರಿಪುರಾದ ಕೃಷಿಕರು ಒತ್ತಾಯ ಮಾಡುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪನ್ಸೆಂಗ್ ಬಿ ಮಾರಾಕ್ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಸರ್ಕಾರ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ತಮ್ಮ ಅಡಿಕೆ ಬೆಳೆಯನ್ನು ಅವಲಂಬಿಸಿದ್ದಾರೆ. ಆದರೆ ಕಳ್ಳಸಾಗಾಣಿಕೆಯು ಇಲ್ಲಿನ ಕೃಷಿಕರ ಮೇಲೆ ಪರಿಣಾಮ ಬೀರುತ್ತಿದೆ, ಹಾಗಿದ್ದರೂ ಸರ್ಕಾರ, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯರು ಎದುರಿಸುತ್ತಿರುವ ಸಂಕಷ್ಟದ ಅರಿವಿದ್ದರೂ ಕಳ್ಳ ವ್ಯಾಪಾರವನ್ನು ಮುಂದುವರೆಸಿದ್ದಾರೆ, ರಾಜಕೀಯ ಪಕ್ಷಗಳು ಸೇರಿದಂತೆ ಅನೇಕ ಜನರು  ಕಳ್ಳಸಾಗಣೆಯ ವಿಷಯವನ್ನು ಎತ್ತಿದ್ದಾರೆ ಆದರೆ ಸಚಿವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ದೂರಿದ್ದಾರೆ.

The issue of illegal Arecanut  from Myanmar through Bangladesh has literally shaken the entire Meghalaya with many complaining that the same was affecting the entire trade.

Source : TST News

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

1 hour ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

3 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

5 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

10 hours ago