Advertisement
MIRROR FOCUS

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

Share

ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ ಬಹುದೊಡ್ಡ ಸವಾಲು. ಅಡಿಕೆ ಕಳ್ಳಸಾಗಾಣಿಕೆಯ ಕಾರಣದಿಂದ ಅಲ್ಲಿನ ಅಡಿಕೆ ಧಾರಣೆ ಕುಸಿತವಾಗಿದೆ. ಹೀಗಾಗಿ ಈಗ ಚುನಾವಣೆಯ ವೇಳೆ ಅಲ್ಲಿನ ಅಭ್ಯರ್ಥಿಗಳಿಗೆ ಅಡಿಕೆ ಕಳ್ಳಸಾಗಾಣಿಕೆಯೇ ಒಂದು ಇಶ್ಯೂ ಆಗಿದೆ. ಈಗ ಕೃಷಿಕರು ಪ್ರಶ್ನಿಸುತ್ತಿದ್ದಾರೆ.

ಅಡಿಕೆ ಅಕ್ರಮ ಸಾಗಾಟದ  ಸಮಸ್ಯೆ ಈಗ ಗಂಭೀರ ಸ್ವರೂಪದ ತಿರುವು ಪಡೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಈ ಕುರಿತು ಮೇಘಾಲಯ ಸರ್ಕಾರ ಮೌನ ವಹಿಸಿರುವುದನ್ನು ಕೆಲವು ರೈತರು ಪ್ರಶ್ನಿಸಿದ್ದಾರೆ. ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಮೂಲಕ ಅಕ್ರಮ ಅಡಿಕೆ ಸಾಗಾಟವು ಮೇಘಾಲಯದ ಕೆಲವು ಪ್ರದೇಶದ ಕೃಷಿಕರನ್ನು ಹಾಗೂ ವ್ಯಾಪಾರಿಗಳ ಮೇಲೂ ಪರಿಣಾಮ ಬೀರಿದೆ.ಹಲವು ಸಮಯಗಳಿಂದ ಈ ಕಳ್ಳಸಾಗಾಣಿಕೆಯಾಗುತ್ತಿದ್ದರೂ ಧಾರಣೆ ಕುಸಿತದ ಕಾರಣದಿಂದ ಅಡಿಕೆ ಪ್ರಮುಖ ಬೆಳೆಯಾಗಿರಲಿಲ್ಲ. ಆದರೆ ಈಚೆಗೆ ಕೆಲವು ಸಮಯಗಳಿಂದ ಧಾರಣೆ ಏರಿಕೆಯಾದ ಕಾರಣ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಹೀಗಾಗಿ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಮೇಘಾಲಯದ , ತ್ರಿಪುರಾದ ಕೃಷಿಕರು ಒತ್ತಾಯ ಮಾಡುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪನ್ಸೆಂಗ್ ಬಿ ಮಾರಾಕ್ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಸರ್ಕಾರ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ತಮ್ಮ ಅಡಿಕೆ ಬೆಳೆಯನ್ನು ಅವಲಂಬಿಸಿದ್ದಾರೆ. ಆದರೆ ಕಳ್ಳಸಾಗಾಣಿಕೆಯು ಇಲ್ಲಿನ ಕೃಷಿಕರ ಮೇಲೆ ಪರಿಣಾಮ ಬೀರುತ್ತಿದೆ, ಹಾಗಿದ್ದರೂ ಸರ್ಕಾರ, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯರು ಎದುರಿಸುತ್ತಿರುವ ಸಂಕಷ್ಟದ ಅರಿವಿದ್ದರೂ ಕಳ್ಳ ವ್ಯಾಪಾರವನ್ನು ಮುಂದುವರೆಸಿದ್ದಾರೆ, ರಾಜಕೀಯ ಪಕ್ಷಗಳು ಸೇರಿದಂತೆ ಅನೇಕ ಜನರು  ಕಳ್ಳಸಾಗಣೆಯ ವಿಷಯವನ್ನು ಎತ್ತಿದ್ದಾರೆ ಆದರೆ ಸಚಿವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ದೂರಿದ್ದಾರೆ.

The issue of illegal Arecanut  from Myanmar through Bangladesh has literally shaken the entire Meghalaya with many complaining that the same was affecting the entire trade.

Source : TST News

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago