Advertisement
MIRROR FOCUS

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

Share

ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ ಬಹುದೊಡ್ಡ ಸವಾಲು. ಅಡಿಕೆ ಕಳ್ಳಸಾಗಾಣಿಕೆಯ ಕಾರಣದಿಂದ ಅಲ್ಲಿನ ಅಡಿಕೆ ಧಾರಣೆ ಕುಸಿತವಾಗಿದೆ. ಹೀಗಾಗಿ ಈಗ ಚುನಾವಣೆಯ ವೇಳೆ ಅಲ್ಲಿನ ಅಭ್ಯರ್ಥಿಗಳಿಗೆ ಅಡಿಕೆ ಕಳ್ಳಸಾಗಾಣಿಕೆಯೇ ಒಂದು ಇಶ್ಯೂ ಆಗಿದೆ. ಈಗ ಕೃಷಿಕರು ಪ್ರಶ್ನಿಸುತ್ತಿದ್ದಾರೆ.

ಅಡಿಕೆ ಅಕ್ರಮ ಸಾಗಾಟದ  ಸಮಸ್ಯೆ ಈಗ ಗಂಭೀರ ಸ್ವರೂಪದ ತಿರುವು ಪಡೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಈ ಕುರಿತು ಮೇಘಾಲಯ ಸರ್ಕಾರ ಮೌನ ವಹಿಸಿರುವುದನ್ನು ಕೆಲವು ರೈತರು ಪ್ರಶ್ನಿಸಿದ್ದಾರೆ. ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಮೂಲಕ ಅಕ್ರಮ ಅಡಿಕೆ ಸಾಗಾಟವು ಮೇಘಾಲಯದ ಕೆಲವು ಪ್ರದೇಶದ ಕೃಷಿಕರನ್ನು ಹಾಗೂ ವ್ಯಾಪಾರಿಗಳ ಮೇಲೂ ಪರಿಣಾಮ ಬೀರಿದೆ.ಹಲವು ಸಮಯಗಳಿಂದ ಈ ಕಳ್ಳಸಾಗಾಣಿಕೆಯಾಗುತ್ತಿದ್ದರೂ ಧಾರಣೆ ಕುಸಿತದ ಕಾರಣದಿಂದ ಅಡಿಕೆ ಪ್ರಮುಖ ಬೆಳೆಯಾಗಿರಲಿಲ್ಲ. ಆದರೆ ಈಚೆಗೆ ಕೆಲವು ಸಮಯಗಳಿಂದ ಧಾರಣೆ ಏರಿಕೆಯಾದ ಕಾರಣ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಹೀಗಾಗಿ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಮೇಘಾಲಯದ , ತ್ರಿಪುರಾದ ಕೃಷಿಕರು ಒತ್ತಾಯ ಮಾಡುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪನ್ಸೆಂಗ್ ಬಿ ಮಾರಾಕ್ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಸರ್ಕಾರ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ತಮ್ಮ ಅಡಿಕೆ ಬೆಳೆಯನ್ನು ಅವಲಂಬಿಸಿದ್ದಾರೆ. ಆದರೆ ಕಳ್ಳಸಾಗಾಣಿಕೆಯು ಇಲ್ಲಿನ ಕೃಷಿಕರ ಮೇಲೆ ಪರಿಣಾಮ ಬೀರುತ್ತಿದೆ, ಹಾಗಿದ್ದರೂ ಸರ್ಕಾರ, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯರು ಎದುರಿಸುತ್ತಿರುವ ಸಂಕಷ್ಟದ ಅರಿವಿದ್ದರೂ ಕಳ್ಳ ವ್ಯಾಪಾರವನ್ನು ಮುಂದುವರೆಸಿದ್ದಾರೆ, ರಾಜಕೀಯ ಪಕ್ಷಗಳು ಸೇರಿದಂತೆ ಅನೇಕ ಜನರು  ಕಳ್ಳಸಾಗಣೆಯ ವಿಷಯವನ್ನು ಎತ್ತಿದ್ದಾರೆ ಆದರೆ ಸಚಿವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ದೂರಿದ್ದಾರೆ.

The issue of illegal Arecanut  from Myanmar through Bangladesh has literally shaken the entire Meghalaya with many complaining that the same was affecting the entire trade.

Source : TST News

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

16 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago