ರೇಷ್ಮೆ ಗೂಡಿಗೆ ಉತ್ತಮ ಬೆಲೆ ಲಭಿಸುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ರೇಷ್ಮೆ ಬೆಳೆಯಲು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಪ್ರೋತ್ಸಾಹದಿಂದ ಜಿಲ್ಲೆಯಲ್ಲಿ ರೇಷ್ಮೆ ಕೃಷಿಗೆ ಉತ್ತೇಜನ ಸಿಕ್ಕಿದೆ.
ರೈತರು ತಮ್ಮ ರೇಷ್ಮೆ ಗೂಡುಗಳನ್ನು ಕೊಳ್ಳೇಗಾಲದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಹಾಗೂ ಸಂತೆ ಮರಹಳ್ಳಿ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಿ ಉತ್ತಮ ಲಾಭ ಗಳಿಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡು ಕೆಜಿಗೆ 750ರಿಂದ 800 ರೂಪಾಯಿವರೆಗೆ ಮಾರಾಟವಾಗುತ್ತಿದೆ ಎಂದು ದೂರದರ್ಶನ ವರದಿ ಮಾಡಿದೆ.
ಜಿಲ್ಲೆಯಲ್ಲಿ ಚಳಿ ಪ್ರಮಾಣ ಹೆಚ್ಚಿದ್ದು, ಹಿಮ ಬೀಳುತ್ತಿರುವುದರಿಂದ ಇಳುವರಿ ಪ್ರಮಾಣ ಸ್ವಲ್ಪ ಮಟ್ಟಿಗೆ ಕುಸಿದಿದೆ. ಆದರೂ ಉತ್ತಮ ದರ ಲಭ್ಯವಾಗುತ್ತಿರುವುದರಿಂದ ರೈತರಿಗೆ ಆದಾಯದಲ್ಲಿ ಏರಿಕೆ ಕಂಡುಬರುತ್ತಿದೆ.
ರೈತ ಮಹದೇವಸ್ವಾಮಿ ಮಾತನಾಡಿ, ಪಾರಂಪರಿಕವಾಗಿ ರೇಷ್ಮೆ ಬೆಳೆಯುತ್ತಿದ್ದು, ಪ್ರತಿ ಬೆಳೆಗೆ 80ರಿಂದ 90 ಸಾವಿರ ರೂಪಾಯಿ ಆದಾಯ ಗಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಮತ್ತೋರ್ವ ರೈತ ನಾಗೇಶ್ ಮಾತನಾಡಿ, ರೇಷ್ಮೆ ಬೆಳೆಯು ಬೇರೆ ಬೆಳೆಗಳಿಗಿಂತ ಲಾಭದಾಯಕವಾಗಿದ್ದು, ಎಲ್ಲಾ ಖರ್ಚುಗಳನ್ನು ಕಡಿತ ಮಾಡಿದ ಬಳಿಕ ಶೇಕಡಾ 70ರಷ್ಟು ಉಳಿತಾಯ ಸಾಧ್ಯವಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರೇಷ್ಮೆ ಇಲಾಖೆ ಉಪನಿರ್ದೇಶಕ ರಾಚಪ್ಪಾಜಿ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ರೇಷ್ಮೆ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ 219 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ತಿಳಿಸಿದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…
ಒಂದು ಖಾಸಗಿ ಕಾರ್ಯಕ್ರಮ. ಮೂರು ಪತ್ರಕರ್ತರು. ಪಕ್ಕದಲ್ಲೇ ಸಾಮಾಜಿಕ ಕಾರ್ಯಕರ್ತರು, ಸಹಕಾರಿಗಳು, ಯುವಕರು,…