Advertisement
ಸುದ್ದಿಗಳು

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

Share

ರೇಷ್ಮೆ ಗೂಡಿಗೆ ಉತ್ತಮ ಬೆಲೆ ಲಭಿಸುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ರೇಷ್ಮೆ ಬೆಳೆಯಲು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಪ್ರೋತ್ಸಾಹದಿಂದ ಜಿಲ್ಲೆಯಲ್ಲಿ ರೇಷ್ಮೆ ಕೃಷಿಗೆ ಉತ್ತೇಜನ ಸಿಕ್ಕಿದೆ.

ರೈತರು ತಮ್ಮ ರೇಷ್ಮೆ ಗೂಡುಗಳನ್ನು ಕೊಳ್ಳೇಗಾಲದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಹಾಗೂ ಸಂತೆ ಮರಹಳ್ಳಿ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಿ ಉತ್ತಮ ಲಾಭ ಗಳಿಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡು ಕೆಜಿಗೆ 750ರಿಂದ 800 ರೂಪಾಯಿವರೆಗೆ ಮಾರಾಟವಾಗುತ್ತಿದೆ ಎಂದು ದೂರದರ್ಶನ ವರದಿ ಮಾಡಿದೆ.

ಜಿಲ್ಲೆಯಲ್ಲಿ ಚಳಿ ಪ್ರಮಾಣ ಹೆಚ್ಚಿದ್ದು, ಹಿಮ ಬೀಳುತ್ತಿರುವುದರಿಂದ ಇಳುವರಿ ಪ್ರಮಾಣ ಸ್ವಲ್ಪ ಮಟ್ಟಿಗೆ ಕುಸಿದಿದೆ. ಆದರೂ ಉತ್ತಮ ದರ ಲಭ್ಯವಾಗುತ್ತಿರುವುದರಿಂದ ರೈತರಿಗೆ ಆದಾಯದಲ್ಲಿ ಏರಿಕೆ ಕಂಡುಬರುತ್ತಿದೆ.

ರೈತ ಮಹದೇವಸ್ವಾಮಿ ಮಾತನಾಡಿ, ಪಾರಂಪರಿಕವಾಗಿ ರೇಷ್ಮೆ ಬೆಳೆಯುತ್ತಿದ್ದು, ಪ್ರತಿ ಬೆಳೆಗೆ 80ರಿಂದ 90 ಸಾವಿರ ರೂಪಾಯಿ ಆದಾಯ ಗಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಮತ್ತೋರ್ವ ರೈತ ನಾಗೇಶ್ ಮಾತನಾಡಿ, ರೇಷ್ಮೆ ಬೆಳೆಯು ಬೇರೆ ಬೆಳೆಗಳಿಗಿಂತ ಲಾಭದಾಯಕವಾಗಿದ್ದು, ಎಲ್ಲಾ ಖರ್ಚುಗಳನ್ನು ಕಡಿತ ಮಾಡಿದ ಬಳಿಕ ಶೇಕಡಾ 70ರಷ್ಟು ಉಳಿತಾಯ ಸಾಧ್ಯವಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೇಷ್ಮೆ ಇಲಾಖೆ ಉಪನಿರ್ದೇಶಕ ರಾಚಪ್ಪಾಜಿ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ರೇಷ್ಮೆ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ 219 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

8 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

23 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

24 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago