ರೇಷ್ಮೆ ಉದ್ಯಮ ಗ್ರಾಮೀಣ ಪ್ರದೇಶದ ರೈತರ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸಿದೆ. ಭಾರತ ಎರಡನೇ ಅತಿದೊಡ್ಡ ರೇಷ್ಮೆ ಉತ್ಪಾದಕ ದೇಶವಾಗಿದೆ ಎಂದು ಸೆಂಟ್ರಲ್ ಸಿಲ್ಕ್ ಬೋರ್ಡ್ ತಾಂತ್ರಿಕ ನಿರ್ದೇಶಕ ಮಂಥಿರಾ ಮೂರ್ತಿ ಹೇಳಿದರು.
ಕೇಂದ್ರ ರೇಷ್ಮೆ ಮಂಡಳಿ ಬೆಂಗಳೂರಿನಲ್ಲಿ ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ನಡೆದ ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸೆಂಟ್ರಲ್ ಸಿಲ್ಕ್ ಬೋರ್ಡ್ ನ ಸದಸ್ಯ ಕಾರ್ಯದರ್ಶಿ ಮಾತನಾಡಿ ಮಂಡಳಿಯು ದೇಶದಲ್ಲಿ ರೇಷ್ಮೆ ಕೃಷಿಯಲ್ಲಿ ತನ್ನದೇ ಆದ ತಾಂತ್ರಿಕ ನೈಪುಣ್ಯತೆ ಹೊಂದಿದ್ದು, ವಿವಿಧ ರೀತಿಯ ಸಂಶೋಧನೆಗಳನ್ನು ನಡೆಸುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸುವ ಮೂಲಕ ರೇಷ್ಮೆ ಕೃಷಿಯನ್ನು ಮತ್ತೊಂದು ಹಂತಕ್ಕೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಸಂಶೋಧಕ ಅರುಣ್, ಹಿಪ್ಪು ನೇರಳೆಗೆ ಮಣ್ಣಿನಿಂದ ಬರುವ ರೋಗಗಳನ್ನು ತಡೆಗಟ್ಟಲು ಮಂಡಳಿಯಿಂದ ‘ಮಿಸ್ಟರ್ ಪ್ರೊ’ ಎಂಬ ದ್ರಾವಣವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಹಿಪ್ಪನೇರಳೆ ಗಿಡಕ್ಕೆ ಬರುವ ರೋಗಗಳು ನಿವಾರಣೆಯಾಗಲಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳು ಹಾಗೂ ರೇಷ್ಮೆ ಕೃಷಿಕರು ಭಾಗವಹಿಸಿದ್ದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…