ರೇಷ್ಮೆ ಉದ್ಯಮ ಗ್ರಾಮೀಣ ಪ್ರದೇಶದ ರೈತರ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸಿದೆ. ಭಾರತ ಎರಡನೇ ಅತಿದೊಡ್ಡ ರೇಷ್ಮೆ ಉತ್ಪಾದಕ ದೇಶವಾಗಿದೆ ಎಂದು ಸೆಂಟ್ರಲ್ ಸಿಲ್ಕ್ ಬೋರ್ಡ್ ತಾಂತ್ರಿಕ ನಿರ್ದೇಶಕ ಮಂಥಿರಾ ಮೂರ್ತಿ ಹೇಳಿದರು.
ಕೇಂದ್ರ ರೇಷ್ಮೆ ಮಂಡಳಿ ಬೆಂಗಳೂರಿನಲ್ಲಿ ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ನಡೆದ ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸೆಂಟ್ರಲ್ ಸಿಲ್ಕ್ ಬೋರ್ಡ್ ನ ಸದಸ್ಯ ಕಾರ್ಯದರ್ಶಿ ಮಾತನಾಡಿ ಮಂಡಳಿಯು ದೇಶದಲ್ಲಿ ರೇಷ್ಮೆ ಕೃಷಿಯಲ್ಲಿ ತನ್ನದೇ ಆದ ತಾಂತ್ರಿಕ ನೈಪುಣ್ಯತೆ ಹೊಂದಿದ್ದು, ವಿವಿಧ ರೀತಿಯ ಸಂಶೋಧನೆಗಳನ್ನು ನಡೆಸುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸುವ ಮೂಲಕ ರೇಷ್ಮೆ ಕೃಷಿಯನ್ನು ಮತ್ತೊಂದು ಹಂತಕ್ಕೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಸಂಶೋಧಕ ಅರುಣ್, ಹಿಪ್ಪು ನೇರಳೆಗೆ ಮಣ್ಣಿನಿಂದ ಬರುವ ರೋಗಗಳನ್ನು ತಡೆಗಟ್ಟಲು ಮಂಡಳಿಯಿಂದ ‘ಮಿಸ್ಟರ್ ಪ್ರೊ’ ಎಂಬ ದ್ರಾವಣವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಹಿಪ್ಪನೇರಳೆ ಗಿಡಕ್ಕೆ ಬರುವ ರೋಗಗಳು ನಿವಾರಣೆಯಾಗಲಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳು ಹಾಗೂ ರೇಷ್ಮೆ ಕೃಷಿಕರು ಭಾಗವಹಿಸಿದ್ದರು.
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…
ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…