ರೇಷ್ಮೆ ಉದ್ಯಮ ಗ್ರಾಮೀಣ ಪ್ರದೇಶದ ರೈತರ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸಿದೆ. ಭಾರತ ಎರಡನೇ ಅತಿದೊಡ್ಡ ರೇಷ್ಮೆ ಉತ್ಪಾದಕ ದೇಶವಾಗಿದೆ ಎಂದು ಸೆಂಟ್ರಲ್ ಸಿಲ್ಕ್ ಬೋರ್ಡ್ ತಾಂತ್ರಿಕ ನಿರ್ದೇಶಕ ಮಂಥಿರಾ ಮೂರ್ತಿ ಹೇಳಿದರು.
ಕೇಂದ್ರ ರೇಷ್ಮೆ ಮಂಡಳಿ ಬೆಂಗಳೂರಿನಲ್ಲಿ ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ನಡೆದ ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸೆಂಟ್ರಲ್ ಸಿಲ್ಕ್ ಬೋರ್ಡ್ ನ ಸದಸ್ಯ ಕಾರ್ಯದರ್ಶಿ ಮಾತನಾಡಿ ಮಂಡಳಿಯು ದೇಶದಲ್ಲಿ ರೇಷ್ಮೆ ಕೃಷಿಯಲ್ಲಿ ತನ್ನದೇ ಆದ ತಾಂತ್ರಿಕ ನೈಪುಣ್ಯತೆ ಹೊಂದಿದ್ದು, ವಿವಿಧ ರೀತಿಯ ಸಂಶೋಧನೆಗಳನ್ನು ನಡೆಸುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸುವ ಮೂಲಕ ರೇಷ್ಮೆ ಕೃಷಿಯನ್ನು ಮತ್ತೊಂದು ಹಂತಕ್ಕೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಸಂಶೋಧಕ ಅರುಣ್, ಹಿಪ್ಪು ನೇರಳೆಗೆ ಮಣ್ಣಿನಿಂದ ಬರುವ ರೋಗಗಳನ್ನು ತಡೆಗಟ್ಟಲು ಮಂಡಳಿಯಿಂದ ‘ಮಿಸ್ಟರ್ ಪ್ರೊ’ ಎಂಬ ದ್ರಾವಣವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಹಿಪ್ಪನೇರಳೆ ಗಿಡಕ್ಕೆ ಬರುವ ರೋಗಗಳು ನಿವಾರಣೆಯಾಗಲಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳು ಹಾಗೂ ರೇಷ್ಮೆ ಕೃಷಿಕರು ಭಾಗವಹಿಸಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…